Asianet Suvarna News Asianet Suvarna News

ಅಯೋಧ್ಯೆ ತೀರ್ಪು: ಬಾಗಲಕೋಟೆ ತೋಟಗಾರಿಕೆ ವಿವಿ ಪರೀಕ್ಷೆ ಮುಂದೂಡಿಕೆ

ವಿವಿಯ ಬಿಎಸ್ಸಿ (ತೋಟಗಾರಿಕೆ) 3ನೇ ವರ್ಷದ 1 ಸೆಮೆಸ್ಟರ್ ಪರೀಕ್ಷೆ ಮುಂದೂಡಿಕೆ|ಅಯೋಧ್ಯೆ ತೀರ್ಪು ಪ್ರಕಟ|ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ| ರಾಜ್ಯದ 9 ಕಾಲೇಜುಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳೂ ಸಹ ಮುಂದೂಡಿಕೆ|

Ayodhya Verdict: Postponement of Bagalkot Horticulture University Examination
Author
Bengaluru, First Published Nov 9, 2019, 9:51 AM IST

ಬಾಗಲಕೋಟೆ(ನ.9): ಇಂದು ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ವಿವಿ ಕುಲಸಚಿವರು ಮಾಹಿತಿ ನೀಡಿದ್ದಾರೆ. 
ವಿವಿಯ ಬಿಎಸ್ಸಿ (ತೋಟಗಾರಿಕೆ) 3ನೇ ವರ್ಷದ 1 ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೊತೆಗೆ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.

ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇನ್ನು ರಾಜ್ಯದ 9 ಕಾಲೇಜುಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳೂ ಸಹ ಮುಂದೂಡಿಕೆಯಾಗಿವೆ.
 

Follow Us:
Download App:
  • android
  • ios