ದೈವಾರಾಧನೆಗೆ ಅವಹೇಳನ: ಆಯುಕ್ತರಿಗೆ ದೂರು
ತುಳುನಾಡಿನ ಜನರ ಪ್ರಬಲ ನಂಬಿಕೆ, ಭಯ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿರುವ ದೈವಾರಾಧನೆಯನ್ನು ಅವಹೇಳನ ಮಾಡುವಂತಹ ಪೋಸ್ಟ್ ಒಂದನ್ನು ‘ಟ್ರೋಲ್ ಹೂ ಟ್ರೋಲ್ ಕನ್ನಡಿಗ’ ಪೇಸ್ಬುಕ್ ಪುಟದಲ್ಲಿ ಹಾಕಿದ್ದು ಈ ಕುರಿತು ದೂರು ದಾಖಲಾಗಿದೆ.
ಮಂಗಳೂರು(ಅ.23): ತುಳುನಾಡಿನ ಜನರ ಪ್ರಬಲ ನಂಬಿಕೆ, ಭಯ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿರುವ ದೈವಾರಾಧನೆಯನ್ನು ಅವಹೇಳನ ಮಾಡುವಂತಹ ಪೋಸ್ಟ್ ಒಂದನ್ನು ‘ಟ್ರೋಲ್ ಹೂ ಟ್ರೋಲ್ ಕನ್ನಡಿಗ’ ಪೇಸ್ಬುಕ್ ಪುಟದಲ್ಲಿ ಹಾಕಿದ್ದು ಈ ಕುರಿತು ದೂರು ದಾಖಲಾಗಿದೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮಾತ್ರವಲ್ಲದೇ ಈ ರೀತಿಯಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವ್ಯಕ್ತಿಗಳು ಮತ್ತು ಫೇಸ್ಬುಕ್ ಪೇಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಕಮಿಷನರ್ ಹರ್ಷ ಅವರಿಗೆ ಮನವಿಯನ್ನೂ ಸಹ ಮಾಡಿದ್ದಾರೆ.
ಚಾಕ್ ಪೀಸ್ ನಿಂದ ವರ್ಲ್ಡ್ಕಪ್ ಕಲಾಕೃತಿ: ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ಗೆ ಕಾರ್ಕಳದ ಸುರೇಂದ್ರ
‘ಟ್ರೋಲ್ ಹೂ ಟ್ರೋಲ್ ಕನ್ನಡಿಗ’ ಎಂಬ ಫೇಸ್ಬುಕ್ ಪುಟದಲ್ಲಿ ಈ ಹಿಂದೆಯೂ ದೈವದೇವರನ್ನು ಅವಮಾನಿಸುವ ರೀತಿಯ ಪೋಸ್ಟ್ ಗಳನ್ನು ಹಾಕಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದೈವಾರಾಧನಾ ಚಾವಡಿ ಮತ್ತು ದಲಿತ ರಕ್ಷಣಾ ವೇದಿಕೆಯವರು ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರೊಂದನ್ನೂ ಸಹ ಸಲ್ಲಿಸಿದ್ದರು.
ಮಂಗಳೂರು: ಎಲ್ಲ ಅಂಚೆ ಕಚೇರಿ ವಿವರ ಗೂಗಲ್ ಮ್ಯಾಪ್ನಲ್ಲಿ..!