Asianet Suvarna News Asianet Suvarna News

ಕನ್ನಡಿಗ ಗೋಪಾಲ್‌ ಶೆಟ್ಟಿ ವಿರುದ್ಧ ಕೈ ಪಕ್ಷದಿಂದ ರಂಗೀಲಾ ನಟಿ ಸೆಣಸು!

ಕನ್ನಡಿಗ ಗೋಪಾಲ್‌ ಶೆಟ್ಟಿವಿರುದ್ಧ ರಂಗೀಲಾ ನಟಿ ಸೆಣಸು| ಪತ್ರಕರ್ತೆ ಸುಪ್ರಿಯಾ ಶ್ರೀನಾತೆಗೆ ಉ.ಪ್ರ.ದ ಮಹಾರಾಜ್‌ಗಂಜ್‌ನಿಂದ ಕಣಕ್ಕೆ| ಮೀರಾಕುಮಾರ್‌ ಮತ್ತೆ ಸಸಾರಾಂನಲ್ಲಿ ಅಖಾಡಕ್ಕೆ

congress fields urmila matondkar from mumbai north
Author
Bangalore, First Published Mar 30, 2019, 3:56 PM IST

ನವದೆಹಲಿ[ಮಾ.30]: ಇತ್ತೀಚಿಗಷ್ಟೇ ಕಾಂಗ್ರೆಸ್‌ ಸೇರಿದ್ದ ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡರ್‌ ಅವರಿಗೆ ಪಕ್ಷ ಮುಂಬೈ ಉತ್ತರ ಲೋಕಸಭಾದಿಂದ ಟಿಕೆಟ್‌ ನೀಡಲಾಗಿದೆ. ಶುಕ್ರವಾರ ಬಿಡುಗಡೆಯಾದ ಕಾಂಗ್ರೆಸ್‌ 12ನೇ ಪಟ್ಟಿಯಲ್ಲಿ ಊರ್ಮಿಳಾ ಹೆಸರನ್ನು ಘೋಷಿಸಲಾಯಿತು.

ಈ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಂಸದ, ಕನ್ನಡಿಗ ಗೋಪಾಲ್‌ ಶೆಟ್ಟಿವಿರುದ್ಧ ಊರ್ಮಿಳಾ ಸೆಣೆಸಲಿದ್ದು, ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಅಖಾಡ ರಂಗೇರಲಿದೆ.

ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದ ಊರ್ಮಿಳಾ, ದ್ವೇಷದ ರಾಜಕೀಯ ವಾತಾವರಣ ತೊಡೆದು ಹಾಕಲು ರಾಜಕಾರಣಕ್ಕೆ ಬಂದಿರುವುದಾಗಿ ತಿಳಿಸಿದ್ದರು.

ಮೀರಾಗೆ ಸಸಾರಾಂ:

ಇದೇ ವೇಳೆ, ಮಾಜಿ ಲೋಕಸಭಾಧ್ಯಕ್ಷೆ ಮೀರಾ ಕುಮಾರ್‌ ಅವರು ತಮ್ಮ ಸಾಂಪ್ರದಾಯಿಕ ಬಿಹಾರದ ಸಸಾರಾಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಇ.ಟಿ. ನೌ ಸಂಪಾದಕಿಗೂ ಟಿಕೆಟ್‌!

ಇನ್ನು ಹಿರಿಯ ಪತ್ರಕರ್ತೆ, ‘ಇ.ಟಿ. ನೌ’ ವಾಣಿಜ್ಯ ಸುದ್ದಿವಾಹಿನಿಯ ಸಂಪಾದಕಿ ಸುಪ್ರಿಯಾ ಶ್ರೀನಾತೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅವರಿಗೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಲಭಿಸಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

Follow Us:
Download App:
  • android
  • ios