Asianet Suvarna News Asianet Suvarna News

ನಾಳೆ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

ಏ.15ರಂದು ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಈ ಬಾರಿಯೂ ಅರ್ಚಕ ಎ. ಜ್ಞಾನೇಂದ್ರ ಕರಗ ಹೊರಲಿದ್ದು, ಈಗಾಗಲೇ ದೇವಾಲಯ ಸೇರಿದ್ದು, ಜ್ಞಾನ, ಯೋಗ ಸೇರಿ ಧಾರ್ಮಿಕ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬ್ರೌವದಿಸಹಿತ ಧರ್ಮರಾಯಸ್ವಾಮಿಯ ಪರಿವಾರವನ್ನು ಹೊತ್ತು ಸಾಗುವ ಬೃಹತ್ ಮರದ ತೇರು ನವೀಕರಣಗೊಂಡು ರಥೋತ್ಸವಕ್ಕೆ ಸಜ್ಜಾಗಿ ನಿಂತಿದೆ. 

Historical Bengaluru Karaga Mahotsav to be starts on April 15th grg
Author
First Published Apr 14, 2024, 8:57 AM IST

ಬೆಂಗಳೂರು(ಏ.14):  ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಆರಂಭಕ್ಕೆ ಇನ್ನೊಂದು ದಿನವಷ್ಟೇ ಬಾಕಿ ಇದ್ದು ಶ್ರೀ ಧರ್ಮ ರಾಯಸ್ವಾಮಿ ದೇವಾಲಯ ಹಾಗೂ ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಸೇರಿದಂತೆ ವಿವಿಧ ತಯಾರಿ ಭರದ ಸಿದ್ಧತೆ ನಡೆಯುತ್ತಿದೆ. 

ಏ.15ರಂದು ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಈ ಬಾರಿಯೂ ಅರ್ಚಕ ಎ. ಜ್ಞಾನೇಂದ್ರ ಕರಗ ಹೊರಲಿದ್ದು, ಈಗಾಗಲೇ ದೇವಾಲಯ ಸೇರಿದ್ದು, ಜ್ಞಾನ, ಯೋಗ ಸೇರಿ ಧಾರ್ಮಿಕ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬ್ರೌವದಿಸಹಿತ ಧರ್ಮರಾಯಸ್ವಾಮಿಯ ಪರಿವಾರವನ್ನು ಹೊತ್ತು ಸಾಗುವ ಬೃಹತ್ ಮರದ ತೇರು ನವೀಕರಣಗೊಂಡು ರಥೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಉತ್ಸವದ ಯಶಸ್ಸಿಗೆ ವಕ್ಷಿಕುಲ ಕ್ಷತ್ರಿಯ ಸಮಾಜ ಬಾಂಧವರು, ಗೌಡರು, ಗಣಾಚಾರಿಗಳು, ಗಂಟೆ ಪೂಜಾರಿಗಳು, ಚಾಕರೀದಾರರು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಕರಗಕ್ಕೆ ಸೇಲಂ ಮೊಗ್ಗನ್ನೇ ಬಳಸಲಾಗುವುದು. ಹೀಗಾಗಿ ಭಾನುವಾರದ ನಂತರ  ಮಲ್ಲಿಗೆ ಮೊಗ್ಗು ಬೆಂಗಳೂರಿಗೆ ಬರಲಿದೆ. ಕರ್ನಾಟಕದ ಮಲ್ಲಿಗೆ ಮೊಗ್ಗು ಬರಲಿದೆ. ಈ ವರ್ಷ ಕರಗ ಉತ್ಸವದಲ್ಲಿ ಸಾವಿರಕ್ಕೂ ಅಧಿಕ ವೀರಕುಮಾರರು ಭಾಗವಹಿಸಲಿದ್ದು, ಎಲ್ಲರಿಗೂ ಧರ್ಮರಾಯಸ್ವಾಮಿ ದೇವಸ್ಥಾನದ ಕಡೆಯಿಂದ ಉಚಿತ ಕೆಂಪು ವಸ್ತ್ರ, ಪೇಟ ನೀಡಲಾಗುವುದು. ಜತೆಗೆ ದೀಕ್ಷೆ ತೆಗೆದುಕೊಳ್ಳುವವರಿಗೆ ದೀಕ್ಷಾ ಖಡ್ಗಗಳನ್ನೂ ಉಚಿತವಾಗಿ ನೀಡಲಾಗುವುದು ಎಂದು ಶ್ರೀ ಧರ್ಮರಾಯಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸತೀಶ್ ಮಾಹಿತಿ ನೀಡಿದ್ದಾರೆ.

ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೂ ಕಾಡುವುದೇ ಜಲಕಂಟಕ; ಬಿಬಿಎಂಪಿಯಿಂದ ಪೂರ್ವಭಾವಿ ಸಭೆ!

ದೇಗುಲದಲ್ಲಿ ಬಿದಿರಿನ ಮರ ನೆಟ್ಟು ಧ್ವಜಾರೋಹಣ

ಉತ್ಸವದಲ್ಲಿ ಸಂಪ್ರದಾಯದಂತೆ ಜರಗನಹಳ್ಳಿಯ ಕುಲಬಾಂಧವರು ಪ್ರತಿ ವರ್ಷದಂತೆ ಬಿದಿರಿನ ಮರವನ್ನು ತರಲಿದ್ದು, ಅದನ್ನು ದೇವಾಲಯದ ಆವರಣದಲ್ಲಿ ನೆಟ್ಟು, ಸೋಮವಾರ ರಾತ್ರಿ ರಥೋತ್ಸವ ಹಾಗೂ ಧ್ವಜಾರೋಹಣ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಹೀಗೆ ಚೈತ್ರಮಾಸ ಶುಕ್ಲ ಪಕ್ಷದ ಸಪ್ತಮಿ ದಿನ ಆರಂಭವಾಗಿ ಬಿಡಿಗೆವರೆಗೆ ಉತ್ಸವ ಜರುಗಲಿದೆ. ಏ.23ರ ಚೈತ್ರ ಪೌರ್ಣಮ ದಿನವಾದ ಮಂಗಳವಾರ ಶ್ರೀ ಧರ್ಮರಾಯಸ್ವಾಮಿ ಮಹಾರಥೋತ್ಸವ ಹಾಗೂ ಕರಗ ಶಕ್ತ್ಯೋತ್ಸವ ವಿಜೃಂಭಣೆಯಿಂದ ಜರುಗಲಿದೆ.

ಇನ್ನೂ ಅನುದಾನ ಬಿಡುಗಡೆ ಮಾಡದ ಬಿಬಿಎಂಪಿ

ಕರಗ ಉತ್ಸವಕ್ಕೆ ಬಿಬಿಎಂಪಿ ವತಿಯಿಂದ 1.5 ಕೋಟಿ ಮೀಸಲಿಡಲಾಗಿದೆ. ಆದರೆ ಉತ್ಸವ ಸಮೀಪಿಸುತ್ತಿದ್ದರೂ, ಪಾಲಿಕೆಯಿಂದ ಈವರೆಗೂ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ, ಸಮಿತಿ ವತಿಯಿಂದಲೇ ಸಿದ್ಧತಾ ಕಾರ್ಯ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ರಸ್ತೆ ಹಾಗೂ ಕಲ್ಯಾಣಿ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸತೀಶ್ ಮನವಿ ಮಾಡಿದ್ದಾರೆ.

Follow Us:
Download App:
  • android
  • ios