ಕಾಶ್ಮೀರಕ್ಕೆ 15 ರಾಷ್ಟ್ರಗಳ ಅಂತಾರಾಷ್ಟ್ರೀಯ ನಿಯೋಗದ ಭೇಟಿ|  ಅಂತಾರಾಷ್ಟ್ರೀಯ ನಿಯೋಗದಿಂದ ಕಣಿವೆಯ ಸ್ಥಿತಿಗತಿ ಕುರಿತು ಪರಿಶೀಲನೆ| ವಿಶೇಷ ಸ್ಥಾನಮಾನ ರದ್ದತಿ ಬಳಿಕ ಎರಡನೇ ಅಂತಾರಾಷ್ಟ್ರೀಯ ನಿಯೋಗದ ಭೇಟಿ| ಕಾಶ್ಮೀರಿಗರೊಂದಿಗೆ ನೇರ ಸಂವಾದ ನಡೆಸಿದ ಅಂತಾರಾಷ್ಟ್ರೀಯ ನಿಯೋಗ| ವಿಪಕ್ಷ ನಾಯಕರನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಿದ ನಿಯೋಗ| 

ನವದೆಹಲಿ(ಜ.09): ಕರ್ಫ್ಯೂ ಸಡಿಲಿಕೆ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ 15 ರಾಷ್ಟ್ರಗಳ ಸದಸ್ಯರ ನಿಯೋಗವೊಂದು ಭೇಟಿ ನೀಡಿದ್ದು, ವಿಶೇಷ ಸ್ಥಾನಮಾನ ರದ್ದತಿ ನಂತರ ಕಣಿವೆಯ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಹೊಸದಾಗಿ ಅಸ್ತಿತ್ವಕ್ಕೆ ಬಂದ ಕೇಂದ್ರಾಡಳಿತ ಪ್ರದೇಶದ ಸ್ಥಿತಿಗತಿ ಅರಿಯುವುದು ನಿಯೋಗದ ಉದ್ದೇಶವಾಗಿದ್ದು, ಕಣಿವೆ ವಿಪಕ್ಷ ನಾಯಕರೊಂದಿಗೆ ಸಮಾಲೋಚನೆ ನಡೆಸಿರುವುದು ವಿಶೇಷ.

ದ.ಕೊರಿಯಾ, ಮೊರಾಕ್ಕೋ, ನೈಜೀರಿಯಾ, ಗಯಾನಾ, ಅರ್ಜೈಂಟೈನಾ, ನಾರ್ವೆ, ಫಿಲಿಪೈನ್ಸ್, ಮಾಲ್ಡೀವ್ಸ್, ಟೋಗೊ, ಫಿಜಿ, ಪೆರು, ಬಾಂಗ್ಲಾದೇಶ ಹಾಗೂ ವಿಯೇಟ್ನಾಂ ದೇಶಗಳ ಪ್ರತಿನಿಧಿಗಳು ನಿಯೋಗದಲ್ಲಿದ್ದಾರೆ.

ಕಣಿವೆ ನೋಡುವುದೇ ಸುಯೋಗ: ಕಣಿವೆಗೆ ಭೇಟಿ ನೀಡಿದ ಯೂರೋಪಿಯನ್ ನಿಯೋಗ!

ಕಣಿವೆಯ ಸಾಮಾನ್ಯ ಜನರೊಂದಿಗೆ ಸಂವಾದ ನಡೆಸಿರುವ ನಿಯೋಗ, ವಿಶೇಷ ಸ್ಥಾನಮಾನ ರದ್ದತಿ ಹಾಗೂ ನಂತರದ ಬೆಳವಣಿಗೆಗಳ ಕುರಿತು ಅಭಿಪ್ರಾಯ ಸಂಗ್ರಹಿಸಿದೆ.

ಈ ವೇಳೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬಹುತೇಕ ಕಾಶ್ಮೀರಿಗರು ಬೆಂಬಲ ಸೂಚಿಸಿದ್ದು ಕಂಡುಬಂದಿದ್ದು, ಶಾಂತಿಗಾಗಿ ಜನರ ಬಯಕೆಯನ್ನು ಸ್ವಾಗತಿಸುವುದಾಗಿ ನಿಯೋಗ ಹೇಳಿದೆ.

Scroll to load tweet…

ನಿಯೋಗದ ಭೇಟಿಗೂ ಮೊದಲು ಈ ಕುರಿತು ಟ್ವೀಟ್ ಮಾಡಿದ್ದು, ಕಣಿವೆಗೆ ಭೇಟಿ ನೀಡುತ್ತಿರುವ ಎರಡನೇ ನಿಯೋಗವನ್ನು ಸ್ವಾಗತಿಸುವುದಾಗಿ ಹೇಳಿದೆ.

ಈ ಮೊದಲು ಯುರೋಪಿಯನ್ ಯೂನಿಯನ್ ನೇತೃತ್ವದ ನಿಯೋಗ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಣಿವೆಯ ಸಾಮಾನ್ಯ ಜನರೊಂದಿಗೆ ಸಂವಾದ ನಡೆಸುವ ಮೂಲಕ ವಸ್ತುಸ್ಥಿತಿಯ ಕುರಿತು ಮಾಹಿತಿ ಪಡೆಯುವುದು ನಿಯೋಗದ ಉದ್ದೇಶ. ಅದರಂತೆ ಜನರನ್ನು ನೇರವಾಗಿ ಮಾತನಾಡಿಸಿ ಮಾಹಿತಿ ಕಲೆ ಹಾಕಲಾಗಿದೆ.

Scroll to load tweet…

ಅಲ್ಲದೇ ವಿಪಕ್ಷ ನಾಯುಕನ್ನೂ ಭೇಟಿ ಮಾಡಿ ಚರ್ಚೆ ನಡೆಸಲಾಗಿದ್ದು, ವಿಪಕ್ಷದ ಧ್ವನಿಯನ್ನೂ ಕೇಳಿರುವುದು ಈ ನಿಯೋಗದ ವಿಶೇಷತೆ. 

ಒಟ್ಟಿನಲ್ಲಿ ಎರಡನೇ ಅಂತಾರಾಷ್ಟ್ರೀಯ ನಿಯೋಗವೊಂದು ಕಣಿವೆಗೆ ಭೇಟಿ ನೀಡಿದ್ದು, ಅಲ್ಲಿನ ಸ್ಥಿತಿಗತಿಯ ನೈಜ ಪರಿಶೀಲನೆ ನಡೆಸಿದ್ದು, ಶಾಂತಿ ಸ್ಥಾಪನೆಯ ಕೇಂದ್ರ ಸರ್ಕಾರದ ನೀತಿಗೆ ಮತ್ತಷ್ಟು ಬಲ ಬಂದಂತಾಗಿದೆ.