Asianet Suvarna News Asianet Suvarna News

ಲಾಕ್‌ಡೌನ್, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ: ಏನಿದೆ ಏನಿಲ್ಲ?

ಕೇಂದ್ರ ಸರ್ಕಾರದಿಂದ ಲಾಕ್‌ಡೌನ್ ವಿಸ್ರರಣೆ| ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ| ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
Home Ministry of India releases guidelines for lockdown
Author
Bangalore, First Published Apr 15, 2020, 10:23 AM IST
ನವದೆಹಲಿ(ಏ.15): ಕೇಂದ್ರ ಸರ್ಕಾರದಿಂದ ಲಾಕ್‌ಡೌನ್ ಮೇ 3ವರೆಗೆ ವಿಸ್ತರಿಸಲಾಗಿದ್ದು, ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಮಾರ್ಗಸೂಚಿ ಈ ಕೆಳಕಂಡತಿದೆ.

ಏನೆಲ್ಲಾ ಇರಲಿದೆ?

* ಎಲ್ಲಾ ಆಸ್ಪತ್ರೆಗಳು ತೆರೆದಿರಲಿವೆ. ಎಲ್ಲಾ ರೀತಿಯ ರೋಗಿಗಳಿಗೂ ಸೂಕ್ತ ಚಿಕಿತ್ಸೆ. ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ರೀತಿಯ ಲ್ಯಾಬ್‌, ಮೆಡಿಕಲ್ ಶಾಪ್ ಸೇರಿದಂತೆ ಎಲ್ಲವೂ ತೆರೆದಿರಲಿವೆ.

* ರೈತರು ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಂಪೂರ್ಣವಾಗಿ ತೊಡಗಲು ಅನುವು. ರೈತರಿಗೆ ಪೂರಕವಾಗಿ ಗೊಬ್ಬರು, ಬೀಜ ಮತ್ತು ಕೃಷಿ ಸಲಕರಣೆಗಳನ್ನು ಮಾರಾಟ ಮಾಡುವ ಕಂಪೆನಿಗಳು ಕಾರ್ಯ ಆರಂಭಿಸಲು ಅವಕಾಶ.

* ಆಹಾರದ ಸರಪಳಿ ತುಂಡರಿಯದೆ ನೋಡಿಕೊಳ್ಳುವ ಸಲುವಾಗಿ ರೈತರಿಂದ ಪದಾರ್ಥಗಳನ್ನು ಕೊಂಡು ಮಾರುಕಟ್ಟೆಗೆ ಸಾಗಿಸುವ ಎಲ್ಲಾ ಮಾದರಿಯ ಸಂಪರ್ಕಕ್ಕೆ ಅವಕಾಶ.

* ಗ್ರಾಮೀಣ ಭಾಗದಲ್ಲಿ ಎಂಎನ್‌ಆರ್‌ಇಜಿಎ ಕೆಲಸಗಳಿಗೆ ಅನುಮತಿ. ಈ ಮೂಲಕ ಕೃಷಿ ಕೂಲಿಗಳಿಗೆ ಕೆಲಸ ಕೊಡಬಹುದು.
* ಅಡಿಗೆ ಅನಿಲ ಪೂರೈಕೆ, ನೀರು ಸರಬರಾಜು ಹಾಗೂ ಶುಚಿ ಕೆಲಸದಲ್ಲಿ ತೊಡಗಿರುವವರಿಗೆ ಯಾವುದೇ ತೊಂದರೆ ಇಲ್ಲ.

* ಗೂಡ್ಸ್‌ ರೈಲು ಎಂದಿನಂತೆ ಕಾರ್ಯನಿರ್ವಹಣೆ.

* ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಕಾರ್ಯ ನಿರ್ವಿಸಲು ಅವಕಾಶ.

* IT ಉದ್ಯಮ ಶೇ.50 ರಷ್ಟು ಉದ್ಯೋಗಿಗಳ ಜೊತೆಗೆ ಕಚೇರಿಯಲ್ಲಿ ಎಂದಿನಂತೆ ಕಾರ್ಯಾರಂಭ ಮಾಡಲು ಅನುಮತಿ.

* ಗ್ರಾಮ ಪಂಚಾಯತಿ ಮಟ್ಟದ ಸರ್ಕಾರಿ ಕಚೇರಿಗಳು ತೆರೆದಿರುತ್ತವೆ.

* ವಿಶೇಷ ಆರ್ಥಿಕ ವಲಯದ ಅಡಿಯಲ್ಲಿ ಬರುವ ಎಲ್ಲಾ ಕೈಗಾರಿಕೆಗಳು ಹಾಗೂ ಆಹಾರ ಸಂರಕ್ಷಣಾ ಘಟಕಗಳು ಎಂದಿನಂತೆ ಕಾರ್ಯಾರಂಭ ಮಾಡಬಹುದು. ಆದರೆ, ಉದ್ಯೋಗಿಗಳನ್ನು ಸಾಮಾಜಿಕ ಅಂತರದ ನಿಮಯಮಗಳಿಗೆ ಅನುಸಾರವಾಗಿ ಕೈಗಾರಿಕೆಗಳಿಗೆ ಕರೆತರಬೇಕು. ಉತ್ತಮ ಸಾರಿಗೆ ವ್ಯವಸ್ಥೆ ಮಾಡಬೇಕು.

"

3 ಲಕ್ಷ ಜನರ ಮೇಲೆ ಮೋದಿ ಕಣ್ಣು, 2 ನೇ ಹಂತದ ಲಾಕ್‌ಡೌನ್‌ ಹಿಂದಿನ ರಹಸ್ಯ!

ಏನಿರಲ್ಲ?  

* ಲಾಕ್‌ಡೌನ್‌ ನಿಂದಾಗಿ ರಾಷ್ಟ್ರೀಯ-ಅಂತಾರಾಷ್ಟ್ರೀಯ ವಿಮಾನಗಳು, ಎಲ್ಲಾ ರೀತಿಯ ರೈಲು ಸೇವೆಗಳು ಮತ್ತು ಬಸ್‌ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು ಮೇ 03ರ ವರೆಗೆ ಇದು ಮುಂದುವರೆಯುತ್ತದೆ.

* ಎಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸ್ಥಗಿತ.

* ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವ ಪ್ರದೇಶಗಳಿಗೆ ಹೊರಗಿನಿಂದ ಯಾರ ಪ್ರವೇಶಕ್ಕೂ ಅನುಮತಿ ಇಲ್ಲ. ಈ ಪ್ರದೇಶದಲ್ಲಿ ಕಾನೂನು ಕಠಿಣವಾಗಿರಲಿದ್ದು, ಮಾಲಿನ್ಯಕ್ಕೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ.#ಎಲ್ಲಾ ರೀತಿಯ ಸಾರ್ವಜನಿಕ ಸಮಾರಭಗಳಿಗೂ ತಡೆ.

* ಧಾರ್ಮಿಕ ಕ್ಷೇತ್ರಗಳ ಸ್ಥಗಿತ ಮುಂದುವರೆಯಲಿದೆ.
 
Follow Us:
Download App:
  • android
  • ios