Asianet Suvarna News Asianet Suvarna News

JNU ಕ್ಯಾಂಪಸ್‌ಗೆ ನುಗ್ಗಿ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ರಕ್ತ ಸುರಿಯುವಂತೆ ಹಲ್ಲೆ

ಜೆಎನ್‌ಯು ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳ ತಂಡ| ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ| ಸಿಎಎ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಪ್ರತೀಕಾರ?

Violence Breaks out in Delhi JNU Students chief Aishe Ghosh Injured
Author
Bengaluru, First Published Jan 5, 2020, 9:18 PM IST

ನವದೆಹಲಿ(ಜ. 05)  ಮುಖವಾಡ ಧರಿಸಿದ ಗುಂಪೊಂದು ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ಮಾಡಿದೆ.ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

50ಕ್ಕೂ ಅಧಿಕ ಜನರಿದ್ದ ತಂಡ ಜೆಎನ್‌ಯು ಆವರಣ ಪ್ರವೇಶ ಮಾಡಿತ್ತು ಎನ್ನಲಾಗಿದೆ. ಕ್ಯಾಂಪಸ್ ಪ್ರವೇಶ ಮಾಡಿ ಅಲ್ಲಿಂದ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಮಂಗಳೂರು ಪ್ರತಿಭಟನೆ ಯಾರ ಒಳಸಂಚು?

ಸಿಎಎ ಕುರಿತು ಜೆಎನ್ ಯು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ ದುಷ್ಕರ್ಮಿಗಳ ಗುಂಪು ಈ ಕೆಲಸ ಮಾಡಿದೆ ಎಂದು ಆರೋಪಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ.

 

 

 

Follow Us:
Download App:
  • android
  • ios