Asianet Suvarna News Asianet Suvarna News

ಕೇಂದ್ರ ಬಿಜೆಪಿ ವಿರುದ್ಧ ಶಾಸಕ ವಾಗ್ದಾಳಿ

ಕೇಂದ್ರದ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರವಾಹ ಪೀಡಿತರಿಗೆ ಪರಿಹಾರ ನೀಡದೇ ಪರಿತಪಿಸುವಂತೆ ಮಾಡಿದ್ದಾರೆ ಎಂದರು. 

Dr Yathindra Siddaramaiah Slams Union Govt Over Flood relief
Author
Bengaluru, First Published Oct 3, 2019, 10:15 AM IST

ಪಾಂಡವಪುರ [.03]: ರಾಜ್ಯದಲ್ಲಿ ಪ್ರವಾಹ ಬಂದು ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದ ಜನಸಾಮಾನ್ಯರು ಗೋಳಾಡುತ್ತಿದ್ದರೂ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದುವರೆವಿಗೂ ಯಾವುದೇ ಪರಿಹಾರ ನೀಡದೇ ಪ್ರವಾಹ ಪೀಡಿತರು ಪರಿತಪಿಸುವಂತಾಗಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು.

ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆ ಆಲಿಸಿದ ಬಳಿಕ ಮಾತನಾಡಿ, ನನ್ನ ಕ್ಷೇತ್ರವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಮನೆಗಳು ಪ್ರವಾಹದಿಂದ ಜಖಂಗೊಂಡಿವೆ, ಅವರ ಪುನರ್ವಸತಿಗೆ ಇದುವರೆಗೂ ಸೂಕ್ತ ಪರಿಹಾರ ನೀಡದೇ ಪ್ರವಾಹ ಪೀಡಿತ ಜನರು ಇನ್ನೂ ಸಹ ದೇವಾಲಯಗಳಲ್ಲಿ ವಾಸಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ರಾಜ್ಯದ 25 ಮಂದಿ ಸಂಸದರೂ ಸೇರಿದಂತೆ ಬಿಜೆಪಿಯ ಮಂತ್ರಿ ಮಹೋದಯರು, ಹಾಗೂ ರಾಜ್ಯ ಮುಖಂಡರುಗಳು, ಅವರಿಗೆ ಬಾಯಿಗೆ ಬಂದಂತೆ ಮಾತನಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಪಂ ಉಪಾಧ್ಯಕ್ಷ ಹೆಜ್ಜಿಗೆ ಆರ್‌.ಗೋವಿಂದರಾಜನ್‌, ಸೇರಿದಂತೆ ಹಲವಾರು ಮುಖಂಡರುಗಳು ಹಾಜರಿದ್ದರು.

Follow Us:
Download App:
  • android
  • ios