ರಾಜ್ಯ ಸರ್ಕಾರಕ್ಕೆ ಕಪಾಳ ಮೋಕ್ಷ: ಸ್ಟೀಲ್ ಬ್ರಿಡ್ಜ್ ಗೆ ಬ್ರೇಕ್..!
ಸ್ಟೀಲ್ ಬ್ರಿಡ್ಜ್ ನಿರ್ಮಿಸಿಯೇ ಸಿದ್ಧ ಎಂದು ಪಣತೊಟ್ಟಿರುವ ರಾಜ್ಯ ಸರ್ಕಾರಕ್ಕೆ ಕಪಾಳ ಮೋಕ್ಷ ಆಗಿದೆ.
ಬೆಂಗಳೂರು, (ಜ.9): ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಹೊರಟಿದ್ದ ರಾಜ್ಯ ಮೈತ್ರಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.ಪರಿಸರ ಇಲಾಖೆಯ ಕ್ಲಿಯರೆನ್ಸ್ ಇಲ್ಲದೇ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಗೆತ್ತಿಕೊಳ್ಳುವಂತಿಲ್ಲ ಎಂದು ಬಿಡಿಎಗೆ ಹೈಕೋರ್ಟ್ ಆದೇಶ ನೀಡಿದೆ.
"
ಸ್ಟೀಲ್ ಬ್ರಿಡ್ಜ್ ವಿರುದ್ಧ ಮೊದಲು ದನಿ ಎತ್ತಿದ್ದು ಸಂಸದ ರಾಜೀವ್ ಚಂದ್ರಶೇಖರ್
ಪರಸರ ಇಲಾಖೆ ಕ್ಲಿಯರೆನ್ಸ್ ಪಡೆಯದೇ ಪ್ರಾಜೆಕ್ಟ್ ಕೈಗೆತ್ತಿಕೊಳ್ಳದಂತೆ ಸೂಚನೆ ನೀಡಿ, ವಿಚಾರಣೆಯನ್ನ ಜೂನ್ಗೆ ಮುಂದೂಡಿದೆ. ಇದ್ರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಸಂಬಂಧ ನಮ್ಮ ಬೆಂಗಳೂರು ಫೌಂಡೇಶನ್ ಅರ್ಜಿ ಸಲ್ಲಿಸಿತ್ತು.
ಸ್ಟೀಲ್ ಬ್ರಿಡ್ಜ್ ಕಾಮಗಾರಿ ತಡೆಗೆ ಸುಪ್ರೀಂ ನಕಾರ
ಈ ಅರ್ಜಿಯನ್ನು ಇಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿದ್ದ ವಿಭಾಗೀಯ ಪೀಠ, ನಮ್ಮ ಬೆಂಗಳೂರು ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು.
ಪರಿಸರ ಇಲಾಖೆ ಕ್ಲೀಯರೆನ್ಸ್ ಕಡ್ಡಾಯಗೊಳಿಸಿ 2017ರಲ್ಲಿ ಎನ್ಜಿಟಿ ಆದೇಶ ನೀಡಿದೆ. ಎನ್ಜಿಟಿ ಆದೇಶಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ನಮ್ಮ ಬೆಂಗಳೂರು ಫೌಂಡೇಶನ್ ಪರ ವಕೀಲ ವಿಜಯ್ ಶಂಕರ್ ವಾದ ಮಂಡಿಸಿದರು.
ಸ್ಟೀಲ್ ಬ್ರಿಡ್ಜ್ ಯೋಜನೆ :ಸ್ವತಂತ್ರ ತನಿಖೆಗೆ ರಾಜೀವ್ ಚಂದ್ರಶೇಖರ್ ಆಗ್ರಹ
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಪರಿಸರ ಇಲಾಖೆಯ ಕ್ಲಿಯರೆನ್ಸ್ ಪಡೆದುಕೊಂಡಿದ್ದೀರಾ ಎಂದು ಎಜಿ ಉದಯ್ ಹೊಳ್ಳಾಗೆ ಕೋರ್ಟ್ ಪ್ರಶ್ನೆ ಮಾಡಿದೆ..
ಇನ್ನೂ ಯಾವುದೇ ಕ್ಲಿಯರೆನ್ಸ್ಗೆ ಅರ್ಜಿ ಸಲ್ಲಿಸಿಲ್ಲ ಎಂದು ಬಿಡಿಎ ಪರ ವಕೀಲರು ಉತ್ತರ ನೀಡಿದರು. ನಂತರ ಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.