8 ಲಕ್ಷ ರೂಪಾಯಿ ಮೌಲ್ಯದ ಆಭರಣ ಬಿದ್ದು ಸಿಕ್ಕಿದರೆ ನೀವೇನ್ಮಾಡ್ತೀರಾ..? ಮಂಗಳೂರಿನ ವ್ಯಕ್ತಿಯೊಬ್ಬರು ತಮಗೆ ಸಿಕ್ಕಿದ ಅಷ್ಟೂ ಆಭರಣವನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಂಗಳೂರು(ಜ.15): 8 ಲಕ್ಷ ರೂಪಾಯಿ ಮೌಲ್ಯದ ಆಭರಣ ಬಿದ್ದು ಸಿಕ್ಕಿದರೆ ನೀವೇನ್ಮಾಡ್ತೀರಾ..? ಮಂಗಳೂರಿನ ವ್ಯಕ್ತಿಯೊಬ್ಬರು ತಮಗೆ ಸಿಕ್ಕಿದ ಅಷ್ಟೂ ಆಭರಣವನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಳ್ತಂಗಡಿ ತಾಲೂಕು ಕುಕ್ಯೇಡಿ ಗ್ರಾಮದ ನಿವಾಸಿ ರತ್ನಾಕರ್ ಅವರು ತನಗೆ ಸಿಕ್ಕಿದ 8 ಲಕ್ಷ ರು. ಮೌಲ್ಯದ ಚಿನ್ನಾಭರಣವನ್ನು ಅದರ ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸರ್ಕಾರಕ್ಕೆ ಪತ್ರ ಬರೆದ ಗಣಿ ಧಣಿ!
ರತ್ನಾಕರ್ ಅವರು ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ ಕಳೆದ 6 ತಿಂಗಳಿನಿಂದ ಬೆಳ್ತಂಗಡಿ ಅಗ್ನಿ ಶಾಮಕ ದಳದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಮಾನವೀಯ ಕಾರ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ ಹೋಮ್ ಕಮಾಂಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ನೇತೃತ್ವದಲ್ಲಿ ಸನ್ಮಾನಿಸಲಾಯಿತು.
