ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರನ್ನು ಪೊಲೀಸರು ಗುಂಡು ಹಾರಿಸಿ ಕೊಲ್ಲಬೇಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು(ಏ.21): ಪಾದರಾಯಪುರದಲ್ಲಿ ಕೊರೋನಾ ವಾರಿಯರ್ಸ್‌ಗಳಾದ ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್‌ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ‘ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರನ್ನು ಪೊಲೀಸರು ಗುಂಡು ಹಾರಿಸಿ ಕೊಲ್ಲಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಪ್ರಕರಣ ಭಾನುವಾರ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದ ಅವರು, ತ್ಯಾಗಮಯಿಗಳ ಮೇಲೆ ದಾಳಿ ಮಾಡುವವರು ಯಾರೇ ಆಗಲಿ, ಅವನನ್ನು ಗುಂಡಿಟ್ಟು ಕೊಂದರೂ ತಪ್ಪಿಲ್ಲ.

ಹೋಂ ಕ್ವಾರಂಟೈನ್‌ಗಳ ಮೇಲೆ ನಿಗಾ ಇಡುವುದಕ್ಕೆ App; ಬೆಳ್ತಂಗಡಿಯಲ್ಲಿ ಮೊದಲ ಪ್ರಯೋಗ

ಇಂಥ ಸಂದರ್ಭಗಳಲ್ಲಿ ಪೊಲೀಸರು ಅವರ ಶಕ್ತಿಯನ್ನು ಉಪಯೋಗಿಸಲು ಅಧಿಕಾರ ನೀಡಿ ಗೃಹಮಂತ್ರಿಗಳೇ ಎಂದಿದ್ದರು. ಶಾಸಕರ ಈ ಹೇಳಿಕೆ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಸೋಮವಾರ ಮತ್ತೆ ಫೇಸ್ಬುಕ್‌ನಲ್ಲಿ ಹರೀಶ್‌ ಪೂಂಜಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.