Asianet Suvarna News Asianet Suvarna News

'ಭಾರತ್ ಕೇ ವೀರ್' ಗೀತೆಗೆ ಚಾಲನೆ, ನಮ್ಮ ಸೈನಿಕರಿಗಾಗಿ 12 ಕೋಟಿ ರೂ.ಸಂಗ್ರಹ

ಹುತಾತ್ಮರ ಕುಟುಂಬದ ಕ್ಷೇಮಾಭಿವೃದ್ಧಿಗಾಗಿ ಆರಂಭವಾದ 'ಭಾರತ್ ಕೇ ವೀರ್' ಅಭಿಯಾನದ ಗೀತೆಗೆ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ  12.93 ಕೋಟಿ ರೂ. ಸಂಗ್ರಹಿಸಲಾಗಿದೆ.

Akshay and others raise rs 12 cr for soldiers

ಹೊಸದಿಲ್ಲಿ: ಹುತಾತ್ಮರ ಕುಟುಂಬದ ಕ್ಷೇಮಾಭಿವೃದ್ಧಿಗಾಗಿ ಆರಂಭವಾದ 'ಭಾರತ್ ಕೇ ವೀರ್' ಅಭಿಯಾನದ ಗೀತೆಗೆ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ  12.93 ಕೋಟಿ ರೂ. ಸಂಗ್ರಹಿಸಲಾಗಿದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಆರಂಭವಾದ ಈ ಅಭಿಯಾನದಲ್ಲಿ ಸಂಗ್ರಹವಾದ ಹಣವನ್ನು ಹುತಾತ್ಮರ ಕುಟುಂಬಕ್ಕೆ ಹಾಗೂ ಸೈನಿಕರ ಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು.

 

 

ಕೈಲಾಶ್ ಖೇರ್ ಸಂಗೀತ ಸಂಯೋಜಿಸಿ, ಹಾಡಿರುವ ಈ ಗೀತೆಯನ್ನು ಡೌನ್‌ಲೋಡ್ ಮಾಡಿಕೊಂಡಾಗ ಬಂದ ಹಣವೂ ಸೈನಿಕರ ಕುುಟಂಬದ ಅಗತ್ಯಗಳನ್ನು ಪೂರೈಸಲು ಬಳಸಲಾಗುವುದು. ಮೃತ ಸೈನಿಕರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂ. ಸಿಗುವಂತೆ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್, ಕೇಂದ್ರ ಸಚಿವರಾದ ಕಿರೆಣ್  ರಿಜಿಜು, ಹನ್ಸ್‌ರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮುಂತಾದವರು ಉಪಸ್ಥಿತರಿದ್ದರು.
 

Follow Us:
Download App:
  • android
  • ios