Asianet Suvarna News Asianet Suvarna News

ತನಿಖಾಧಿಕಾರಿಗಳಿಗೆ ಮೊಬೈಲ್ ನೀಡದ ಬಿಎಸ್‌ವೈ ಆಪ್ತ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಧ್ಯಮ ಸಂಚಾಲಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ತನಿಖಾಧಿಕಾರಿಗಳಿಗೆ ತಮ್ಮ ಮೊಬೈಲನ್ನು ನೀಡಲು ಮತ್ತೆ ನಿರಾಕರಿಸಿದ್ದಾರೆ.

BSY PA Refuses To Hand Over Mobile To Investigating officers

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಧ್ಯಮ ಸಂಚಾಲಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ತನಿಖಾಧಿಕಾರಿಗಳಿಗೆ ತಮ್ಮ ಮೊಬೈಲನ್ನು ನೀಡಲು ಮತ್ತೆ ನಿರಾಕರಿಸಿದ್ದಾರೆ.

ಪ್ರಕರಣದ ಸಂಬಂಧ ಮಂಗಳವಾರ 5 ತಾಸುಗಳ ವಿಚಾರಣೆ ಎದುರಿಸಿದ ಸಂತೋಷ್, ಈ ಸಂದರ್ಭದಲ್ಲಿ ಮೊಬೈಲ್ ವಶಕ್ಕೆ ನೀಡುವಂತೆ ತನಿಖಾಧಿಕಾರಿಗಳ ಸೂಚನೆಯನ್ನು ಧಿಕ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಎಸಿಪಿ ಆನಂದ್.ಆರ್.ಬಡಿಗೇರ್, ತನಿಖೆ ಸಲುವಾಗಿ ತಮ್ಮ ಮೊಬೈಲನ್ನು ಸುಪರ್ದಿಗೆ ಕೊಡುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ನೋಟಿಸ್‌ಗೆ ಅವರಿಂದ ಪ್ರತಿಕ್ರಿಯೆ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತನಿಖೆ ಭಾಗಶಃ ಮುಕ್ತಾಯವಾಗಿದ್ದು, ಸಂತೋಷ್ ಅವರ ಮೊಬೈಲ್ ಪರಿಶೀಲನೆ ಮಾತ್ರ ಬಾಕಿ ಉಳಿದಿದೆ. ಈ ಮೊಬೈಲ್‌ನಲ್ಲಿ ಕೃತ್ಯಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿ ಇದೆ ಎಂಬ ಅನುಮಾನವಿದೆ.

 

Follow Us:
Download App:
  • android
  • ios