Asianet Suvarna News Asianet Suvarna News

ಗುಡ್ ನ್ಯೂಸ್ : ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ದಿನ ದಿನಕ್ಕೂ ಏರಿಕೆಯಾಗಿ ಜನರ ತಲೆ ಬಿಸಿಗೆ ಕಾರಣವಾಗಿದ್ದ  ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ. ಸಿಎಂ ಕುಮಾರಸ್ವಾಮಿ ಬೆಲೆ ಇಳಿಕೆಗೆ ಸೂಚನೆ ಹೊರಡಿಸಿದ್ದಾರೆ. 

CM HD Kumaraswamy Order To Reduction Petrol Price
Author
Bengaluru, First Published Sep 16, 2018, 10:27 AM IST

ಬೆಂಗಳೂರು : ವಾಹನ ಸವಾರರಿಗೆ ಇಲ್ಲಿದೆ ಗುಡ್ ನ್ಯೂಸ್. ದಿನದಿನಕ್ಕೆ ಏರಿಕೆಯಾಗಿ ಜನರನ್ನು ಆತಂಕಕ್ಕೆ ದೂಡಿದ್ದ ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ. 

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಸಿಎಂ ಕುಮಾರಸ್ವಾಮಿ ಶುಭ ಸುದ್ದಿಯನ್ನು ನಿಡಿದ್ದಾರೆ. 
 
ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2 ರಿಂದ 3ರು.ನಷ್ಟು ಇಳಿಕೆಗೆ ಸಿಎಂ ಎಚ್ಡಿಕೆ ಸೂಚನೆ ನೀಡಿದ್ದಾರೆ.  ಈ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ. 

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಸಿಎಂ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶವೊಂದೇ ಬಾಕಿ ಇದೆ. 

Follow Us:
Download App:
  • android
  • ios