Asianet Suvarna News Asianet Suvarna News

ಕಾಮಾಲೆಗೂ ಮದ್ದು ಎಳನೀರು..!

ದಿನನಿತ್ಯ ಎಲ್ಲರ ಮನೆಯಲ್ಲಿಯೂ ಅಡುಗೆಗೆ  ಉಪಯೋಗಿಸುವ ಸಾಮಾನ್ಯ ವಸ್ತು ಎಂದರೆ ತೆಂಗು ಆಗಿದೆ. ಇದು ಅಡುಗೆಗೆ ಮಾತ್ರವಲ್ಲದೇ ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆರೋಗ್ಯಕರ ಅಂಶಗಳು ಅಡಗಿವೆ.  ಕರಾವಳಿ ಪ್ರದೇಶ ಮತ್ತು ದಕ್ಷಿಣ ಭಾರತದ ಕೇರಳ, ಒರಿಸ್ಸಾದಲ್ಲಿ ಹೇರಳವಾಗಿ ಬೆಳೆಯಲಾಗುತ್ತದೆ. ಇದರ ಕಾಯಿಯ ತಿರುಳಷ್ಟೇ ಅಲ್ಲದೇ ಈ ಮರದ ಪ್ರತಿಯೊಂದು ಅಂಶವೂ ಮಾನವನಿಗೆ ಉಪಯುಕ್ತವಾದುದಾಗಿದೆ.

Coconut Health Benifit

ದಿನನಿತ್ಯ ಎಲ್ಲರ ಮನೆಯಲ್ಲಿಯೂ ಅಡುಗೆಗೆ  ಉಪಯೋಗಿಸುವ ಸಾಮಾನ್ಯ ವಸ್ತು ಎಂದರೆ ತೆಂಗು ಆಗಿದೆ. ಇದು ಅಡುಗೆಗೆ ಮಾತ್ರವಲ್ಲದೇ ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆರೋಗ್ಯಕರ ಅಂಶಗಳು ಅಡಗಿವೆ.  ಕರಾವಳಿ ಪ್ರದೇಶ ಮತ್ತು ದಕ್ಷಿಣ ಭಾರತದ ಕೇರಳ, ಒರಿಸ್ಸಾದಲ್ಲಿ ಹೇರಳವಾಗಿ ಬೆಳೆಯಲಾಗುತ್ತದೆ. ಇದರ ಕಾಯಿಯ ತಿರುಳಷ್ಟೇ ಅಲ್ಲದೇ ಈ ಮರದ ಪ್ರತಿಯೊಂದು ಅಂಶವೂ ಮಾನವನಿಗೆ ಉಪಯುಕ್ತವಾದುದಾಗಿದೆ.

ಇಂದು ಈ ಕಲ್ಪವೃಕ್ಷದ ಉಪಯೋಗವನ್ನು ತಿಳಿಯೋಣ

*ಇದರ ಹೊಂಬಾಳೆ ಮತ್ತು ಕಾಯಿಯ ತಿರುಳನ್ನು  ರಕ್ತಸ್ರಾವ ಮತ್ತು ಸ್ತ್ರೀಯರಲ್ಲಿ  ಕಂಡುಬರುವ ಮುಟ್ಟಿನ ತೊಂದರೆಗಳಲ್ಲಿ ಉಪಯೋಗಿಸಲಾಗುತ್ತದೆ.

*ಲೇಹ್ಯವನ್ನು ಬಾಣಂತಿ ಉಪಚಾರದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.

*ಎಳನೀರನ್ನು ದಾಹ, ಉರಿಮೂತ್ರವಿದ್ದಾಗ ಸೇವಿಸಬೇಕು.

*ಇದರಿಂದ ತಯಾರಿಸಿದ ನಾರಿಕೇಳ ಲವಣವೆಂಬ ಔಷಧವನ್ನು ಹೊಟ್ಟೆ ಉರಿ, ಹೊಟ್ಟೆ ಉಬ್ಬರಗಳಲ್ಲಿ 1 ಗ್ರಾಂನಷ್ಟು ಸೇವಿಸುತ್ತಾರೆ.

*ಕೊಬ್ಬರಿಯಿಂದ ತಯಾರಿಸಿದ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ತಲೆ ಹೊಟ್ಟು ನಿವಾರಣೆಯಾಗಿ  ಕೂದಲು ಸೊಂಪಾಗಿ ಬೆಳೆಯುತ್ತದೆ

*ಮೂತ್ರಕೋಶದ ಕಲ್ಲಿನಲ್ಲಿ ತೆಂಗಿನ ಹೂವಿನ ಚೂರ್ಣವನ್ನು ಮೊಸರಿನೊಂದಿಗೆ ಸೇವಿಸಬೇಕು.

*ಕಾಮಾಲೆಯಲ್ಲಿ  ಹೆಚ್ಚು ಎಳೆನೀರನ್ನು ಕುಡಿಯುವುದು ಉತ್ತಮ

*ತೆಂಗಿನ ತಿರುಳು ಬಲ ಮತ್ತು ತೂಕವನ್ನು ಹೆಚ್ಚಿಸುತ್ತದೆ.

Follow Us:
Download App:
  • android
  • ios