Asianet Suvarna News Asianet Suvarna News

ಪಾಕ್ ನೆರವಿಗೆ ಭಾರತ ಸಿದ್ಧ: ಇಮ್ರಾನ್ ಖಾನ್‌ಗೆ ರಾಜ್‌ನಾಥ್ ಭರವಸೆ!

ತನ್ನ ದೇಶದಲ್ಲಿರುವ ಉಗ್ರವಾದವನ್ನು ಏಕಾಂಗಿಯಾಗಿ ಮಟ್ಟಹಾಕಲು ಪಾಕಿಸ್ತಾನಕ್ಕೆ ಸಾಧ್ಯವಾಗದೇ ಹೋದಲ್ಲಿ, ಅದು ಭಾರತದ ನೆರವನ್ನು ಪಡೆಯಬಹುದು ಎಂದು ಕೆಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್, ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ಗೆ ಸಲಹೆ ನೀಡಿದ್ದಾರೆ.

India Can Help If You Can not Handle Terrorism Alone says Rajnath Singh To Pak
Author
New Delhi, First Published Dec 3, 2018, 8:01 AM IST

ನವದೆಹಲಿ[ಡಿ.03]: ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಒಂದಕ್ಕೆ ಹೋರಾಡಲು ಅಸಾಧ್ಯವಾದರೆ, ಅದು ಭಾರತದ ಸಹಕಾರ ಕೋರಬಹುದು ಎಂದು ನೆರೆಯ ರಾಷ್ಟ್ರಕ್ಕೆ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಸಲಹೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜನಾಥ್‌ ಸಿಂಗ್‌, ‘ಜಮ್ಮು-ಕಾಶ್ಮೀರ ವಿಚಾರವು ಸಮಸ್ಯೆ ಎಂದು ಪರಿಗಣನೆ ಆಗುವುದೇ ಇಲ್ಲ. ಕಾರಣ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಹೀಗಾಗಿ ಆ ವಿಷಯ ಸಂಬಂಧ ಪಾಕ್‌ ಜೊತೆಗೆ ಯಾವುದೇ ಮಾತುಕತೆಯ ಅವಶ್ಯವಿಲ್ಲ. ಆದರೆ ಭಯೋತ್ಪಾದನೆ ಎಂಬುದು ಒಂದು ಸಮಸ್ಯೆಯಾಗಿದ್ದು, ಈ ಬಗ್ಗೆ ಬೇಕಿದ್ದಲ್ಲಿ ಪಾಕಿಸ್ತಾನ ಚರ್ಚೆ ನಡೆಸಬಹುದು' ಎಂದಿದ್ದಾರೆ.

ಅಲ್ಲದೇ 'ಆಫ್ಘಾನಿಸ್ತಾನದಲ್ಲಿ ಬೇರೂರಿದ ತಾಲಿಬಾನ್‌ ಸೇರಿದಂತೆ ಇತರ ಭಯೋತ್ಪಾದನೆ ವಿರುದ್ಧ ಅಲ್ಲಿನ ಸರ್ಕಾರ ಅಮೆರಿಕದ ಜೊತೆಗೂಡಿ ಹೋರಾಡುತ್ತದೆ ಎಂದಾದರೆ, ಪಾಕಿಸ್ತಾನ ಒಂದಕ್ಕೆ ಭಯೋತ್ಪಾದನೆ ವಿರುದ್ಧ ಹೋರಾಡಲು ಅಸಾಧ್ಯವೆಂದಾದರೆ, ಭಾರತದ ಸಹಾಯ ಕೋರಬಹುದಲ್ಲವೇ ಎಂದು ಪಾಕಿಸ್ತಾನ ಪ್ರಧಾನಿ ಅವರಿಗೆ ಕೇಳಲು ಬಯಸುತ್ತೇನೆ’ ಎಂದು ಗೃಹ ಸಚಿವರು ತಿಳಿಸಿದ್ದಾರೆ.

Follow Us:
Download App:
  • android
  • ios