Asianet Suvarna News Asianet Suvarna News

ಜೆಡಿಎಸ್'ಗೆ ಮತ್ತೆ ದೊಡ್ಡ ಹೊಡೆತ : ರಾಜೀನಾಮೆಗೆ ನಿರ್ಧರಿಸಿದ ಇಬ್ಬರು ಶಾಸಕರು

ಜೆಡಿಎಸ್ ವರಿಷ್ಠ ಎಚ್​.ಡಿ. ದೇವೇಗೌಡ, ಕಾರ್ಯಾಧ್ಯಕ್ಷ  ಕುಮಾರಸ್ವಾಮಿ ಅವರ ಬಗ್ಗೆ ಗೌರವವಿದೆ. ಆದರೆ ಜಿಲ್ಲಾ ಜೆಡಿಎಸ್ ನಾಯಕರ ವರ್ತನೆಯಿಂದ ಬೇಸರಗೊಂಡಿದ್ದು, ಕಾರ್ಯಕರ್ತರ ಜೊತೆ ಚರ್ಚಿಸಿ  ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

JDS MLA Quit may join BJP

ರಾಯಚೂರು(ಜ.17): ಮುಂದೆ ಸರ್ಕಾರ ರಚನೆ ಕನಸು ಕಾಣಿತ್ತಿರುವ ಜೆಡಿಎಸ್'ಗೆ ದೊಡ್ಡಮಟ್ಟದ ಹೊಡೆದ ಬಿದ್ದಿದೆ. ಈಗಾಗಲೇ ಪಕ್ಷದ ವಿರುದ್ಧ ಬಂಡೆದ್ದ 6 ಮಂದಿ ಶಾಸಕರನ್ನು ಅಮಾನತು ಮಾಡಿದ ನಂತರ ಉತ್ತರ ಕರ್ನಾಟಕದ ಇಬ್ಬರು ಶಾಸಕರು ರಾಜೀನಾಮೆಗೆ ನಿರ್ಧರಿಸಿದ್ದಾರೆ.

ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ನಾಳೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ವರಿಷ್ಠ ಎಚ್​.ಡಿ. ದೇವೇಗೌಡ, ಕಾರ್ಯಾಧ್ಯಕ್ಷ  ಕುಮಾರಸ್ವಾಮಿ ಅವರ ಬಗ್ಗೆ ಗೌರವವಿದೆ. ಆದರೆ ಜಿಲ್ಲಾ ಜೆಡಿಎಸ್ ನಾಯಕರ ವರ್ತನೆಯಿಂದ ಬೇಸರಗೊಂಡಿದ್ದು, ಕಾರ್ಯಕರ್ತರ ಜೊತೆ ಚರ್ಚಿಸಿ  ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಲಿಂಗಸಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್  ಕೂಡ ಜೆಡಿಎಸ್ ತೆರೆದು ಬಿಜೆಪಿ ಸೇರುವ ಸಾಧ್ಯತೆಯಿದೆ. ಈ ಇಬ್ಬರು ನಾಯಕರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್  ವಕ್ತಾರ ರಮೇಶ್ ಬಾಬು ನಾವೇ ಅವರಿಬ್ಬರನ್ನು ಪಕ್ಷದಿಂದ ಹೊರ ಕಳುಹಿಸುತ್ತಿರುವುದಾಗಿ ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ.

JDS MLA Quit may join BJP

Follow Us:
Download App:
  • android
  • ios