ಕುಮಾರಸ್ವಾಮಿಗೆ ಕ್ಲಾಸ್ ತೆಗೆದುಕೊಂಡ ಸಂಸದ ಪ್ರತಾಪ್ ಸಿಂಹ
ರೈತರು ಮತ್ತು ರೈತರ ಹೋರಾಟ ಹಾಗೂ ಕಬ್ಬು ಬೆಳೆಗಾರರ ಕುರಿತಾಗಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ.
ಬೆಂಗಳೂರು[ನ.19] ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ರೈತರ ಪ್ರತಿಭಟನೆ ನಡೆಯುತ್ತಿದ್ದು ಸದ್ಯ ಸರಕಾರಕ್ಕೆ ಅನ್ನದಾತರು ಗಡುವು ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರ ರೈತರ ಬೆಳೆಗೆ ವೈಜ್ಞಾನಿಕ ಬೆಲೆಕೊಟ್ಟು ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ಅದನ್ನ ಬಿಟ್ಟು ಮುಖ್ಯಮಂತ್ರಿಗಳ ದುರ್ವರ್ತನೆ ಸರಿಯಲ್ಲ. ಈ ರೀತಿ ಹೇಳಿಕೆಗಳು ಸಿಎಂ ಸ್ಥಾನಕ್ಕೆ ಶೋಭೆ ತರಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಇಮೇಜ್ ಡ್ಯಾಮೇಜ್ ಮಾಡಿದ ಈ 3 ಹೇಳಿಕೆ
ಕಬ್ಬು ಬೆಳೆಗಾರರು ಬಾಕಿ ಹಣ ಪಾವತಿ ಮಾಡಲು ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರೈತ ಮಹಿಳೆಯೊಬ್ಬರು ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆದರೆ ಇದಕ್ಕೆ ತಿರುಗೇಟು ನೀಡುವ ಭರದಲ್ಲಿ ಕುಮಾರಸ್ವಾಮಿ ಆಡಿದ ಮಾತು ವಿವಾದದ ಕಿಡಿ ಹೊತ್ತಿಸಿದೆ.