ರಾಹುಲ್ ದ್ರಾವಿಡ್ ರಾಜ್ಯ ಚುನಾವಣೆಯ ಮತದಾನದ ರಾಯಭಾರಿ
ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದೆ.
ಬೆಂಗಳೂರು(ಮಾ.17): ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಕರ್ನಾಟಕದಲ್ಲಿ ಇನ್ನೆರಡು ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತದಾನ ರಾಯಭಾರಿಯನ್ನಾಗಿ ನೇಮಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ ಎನ್ನಲಾಗಿದೆ.
ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದೆ. ರಾಹುಲ್ ದ್ರಾವಿಡ್ ಸೇರಿದಂತೆ ಐವರನ್ನು ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಘೋಷಣೆ ಮಾಡಲಾಗುತ್ತದೆ. 2013ರ ಚುನಾವಣೆಯಲ್ಲಿ ನಟ ಪುನೀತ್ ರಾಜ್'ಕುಮಾರ್ ರಾಯಭಾರಿಯಾಗಿದ್ದರು.