Asianet Suvarna News Asianet Suvarna News

ಬಿಜೆಪಿ ಹಣಿಯಲು ಶುರುವಾಗಿದೆ ರಾಹುಲ್‌ ಮಾಸ್ಟರ್ ಪ್ಲಾನ್

2019ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರದಂತೆ ಬಿಜೆಪಿಯನ್ನು ಕಟ್ಟಿಹಾಕುವ ಯತ್ನದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ಈ ನಿಟ್ಟಿನಲ್ಲಿ ಸಂಯುಕ್ತ ರಂಗ ಸ್ಥಾಪನೆಗಾಗಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Rahul Gandhis Masterplan To Finish BJP

ನವದೆಹಲಿ : 2019ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರದಂತೆ ಬಿಜೆಪಿಯನ್ನು ಕಟ್ಟಿಹಾಕುವ ಯತ್ನದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ಈ ನಿಟ್ಟಿನಲ್ಲಿ ಸಂಯುಕ್ತ ರಂಗ ಸ್ಥಾಪನೆಗಾಗಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬುಧವಾರವಷ್ಟೇ ಹೊರಬಿದ್ದ ಉತ್ತರ ಪ್ರದೇಶ ಮತ್ತು ಬಿಹಾರ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಬೆನ್ನಲ್ಲೇ, ಬುಧವಾರ ರಾತ್ರಿಯೇ ಶರದ್‌ ಪವಾರ್‌ ಅವರನ್ನು ರಾಹುಲ್‌ ಗಾಂಧಿ ಅವರು ಭೇಟಿ ಮಾಡಿದ್ದಾರೆ.

ಈ ಉಭಯ ನಾಯಕರ ಭೇಟಿ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಸರಿ(ಬಿಜೆಪಿ) ಪಕ್ಷದ ಗೆಲುವಿನ ನಾಗಾಲೋಟವನ್ನು ತಡೆಯಲು ಪ್ರತಿಪಕ್ಷಗಳ ಜಂಟಿ ಕೂಟ ರಚನೆ ಕುರಿತು ಚರ್ಚಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಶೀಘ್ರ ಮಮತಾ ಭೇಟಿ: ಬಿಜೆಪಿ ವಿರುದ್ಧ ಮೊದಲಿನಿಂದಲೂ ಏರು ಧ್ವನಿಯಲ್ಲೇ ಮಾತನಾಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರನ್ನು ರಾಹುಲ್‌ ಶೀಘ್ರವೇ ಭೇಟಿ ಮಾಡಲಿದ್ದು, ಮಾ.28ರಂದು ಶರದ್‌ ಪವಾರ್‌ ಏರ್ಪಡಿಸಲಿರುವ ಪ್ರತಿಪಕ್ಷಗಳ ಜಂಟಿ ಕೂಟಕ್ಕೆ ಬ್ಯಾನರ್ಜಿ ಹಾಜರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ನಡುವೆ, ಬಿಎಸ್‌ಪಿ ಸಂಸ್ಥಾಪಕ ಕಾನ್ಶೀ ರಾಮ್‌ ಅವರನ್ನು ಕೊಂಡಾಡಿರುವ ರಾಹುಲ್‌ ಗಾಂಧಿ, ತುಳಿತಕ್ಕೊಳಗಾದ ಸಮುದಾಯ ಮತ್ತು ಕೆಳ ಜಾತಿ ಸಮುದಾಯವರನ್ನು ರಾಜಕೀಯದ ಮುಖ್ಯವಾಹಿನಿಗೆ ಕರೆತಂದ ಕೀರ್ತಿ ಕಾನ್ಶೀ ರಾಮ್‌ ಅವರಿಗೆ ಸಲ್ಲಬೇಕು. ಕಾನ್ಶೀ ರಾಮ್‌ ಸಾಮಾಜಿಕ ಸುಧಾರಕ ಎಂದು ರಾಹುಲ್‌ ಗಾಂಧಿ ಶ್ಲಾಘಿಸಿದ್ದಾರೆ.

Follow Us:
Download App:
  • android
  • ios