Asianet Suvarna News Asianet Suvarna News

ರಾಮಮಂದಿರ ಯಾವಾಗ?: ಈಗ ಸಂಸದರದ್ದೇ ಪ್ರಶ್ನೆ!

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಮಮಂದಿರ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ಸಂಸದರೇ ಈ ಕುರಿತಗಿ ಪ್ರಶ್ನಿಸಿರುವುದು ಸರ್ಕಾರಕ್ಕೆ ತಲೆನೋವಾಗಿದೆ.

Ram mandir issue echoes at BJP parliamentary meeting leaders ask top brass tough questions
Author
New Delhi, First Published Dec 19, 2018, 9:19 AM IST

ನವದೆಹಲಿ[ಡಿ.19]: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿವಿಧ ಹಿಂದೂ ಪರ ಸಂಘಟನೆಗಳು ಆಗ್ರಹ ಮಾಡಿದ್ದಾಯ್ತು. ಇದೀಗ ಬಿಜೆಪಿ ಸಂಸದರೇ ಈ ಬಗ್ಗೆ ಸರ್ಕಾರವನ್ನು ನೇರವಾಗಿ ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಉತ್ತರಪ್ರದೇಶದ ಹಲವು ಬಿಜೆಪಿ ಸಂಸದರು, ರಾಮಮಂದಿರ ನಿರ್ಮಾಣ ಯಾವಾಗ ಮಾಡುತ್ತೀರಿ? ಕ್ಷೇತ್ರದಲ್ಲಿ, ರಾಜ್ಯದಲ್ಲಿ ಈ ಬಗ್ಗೆ ಮತದಾರರಿಂದ ಪ್ರಶ್ನೆಗಳು ತೂರಿಬರುತ್ತಿವೆ. ಈ ಬಗ್ಗೆ ಸ್ಪಷ್ಟಉತ್ತರ ನೀಡಿ ಎಂದು ಕೋರಿದ್ದಾರೆ. ಈ ವೇಳೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಚಿವ ರಾಜ್‌ನಾಥ್‌ಸಿಂಗ್‌, ರಾಮಮಂದಿರ ನಿರ್ಮಾಣ ಆಗಬೇಕೆಂಬುದು ಎಲ್ಲರ ಬೇಡಿಕೆ. ಆದಕ್ಕೆ ನೀವೆಲ್ಲರೂ ತಾಳ್ಮೆಯಿಂದ ಕಾಯಬೇಕು ಎಂಬ ಸಲಹೆ ನೀಡಿದ್ದಾರೆ.

ಮಂಗಳವಾರದ ಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಇಬ್ಬರೂ ಉಪಸ್ಥಿರಲಿಲ್ಲ.

Follow Us:
Download App:
  • android
  • ios