ಪರ್ರಿಕರ್ ರಕ್ಷಣಾ ಖಾತೆಗೆ ರಾಜೀನಾಮೆ ನೀಡಿದ್ದ ವಿಚಾರವಾಗಿ ಶರದ್ ಪವಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾಋಎ. ಅಷ್ಟಕ್ಕೂ ಪವಾರ್ ಹೇಳಿದ್ದೇನು? ಇಲ್ಲಿದೆ ವಿವರ

ಕೊಲ್ಲಾಪುರ[ಏ.14]: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ವಿರೋಧ ಹೊಂದಿದ್ದ ಮನೋಹರ್‌ ಪರ್ರಿಕರ್‌, ಇದೇ ಕಾರಣಕ್ಕಾಗಿ ರಕ್ಷಣಾ ಸಚಿವ ಹುದ್ದೆಗೆ ರಾಜೀನಾಮೆ ನೀಡಿ ಗೋವಾ ರಾಜಕೀಯಕ್ಕೆ ಮರಳಿದರು ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ ಹೇಳಿಕೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್‌, ರಫೇಲ್‌ ಖರೀದಿ ಮಾಡಿಕೊಂಡ ರೀತಿಗೆ ಪರ್ರಿಕರ್‌ ವಿರೋಧ ಹೊಂದಿದ್ದರು. ಈ ಕಾರಣಕ್ಕಾಗಿಯೇ ಅವರು ಕೇಂದ್ರ ರಾಜಕಾರಣಕ್ಕೆ ವಿದಾಯ ಹೇಳಿ, ಗೋವಾಕ್ಕೆ ಬಂದು ಸಿಎಂ ಹುದ್ದೆ ವಹಿಸಿಕೊಂಡರು ಎಂದು ಹೇಳಿದ್ದಾರೆ.

ಸದ್ಯ ಪವಾರ್ ಈ ಆರೋಪ ಭಾರೀ ಸಂಚಲನ ಮೂಡಿಸಿದೆ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28