ಶ್ರೀಲಂಕಾ ಬಾಂಬ್ ದಾಳಿ: ಕರ್ನಾಟಕದ ಐವರು ಜೆಡಿಎಸ್ ನಾಯಕರು ಬಲಿ!
ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ 5 ಮಂದಿ ಕನ್ನಡಿಗರ ದುರ್ಮರಣ| ಬಾಂಬ್ ಸ್ಫೋಟದಲ್ಲಿ 5 ಮಂದಿ ಜೆಡಿಎಸ್ ಮುಖಂಡರು ಸಾವು | ಕೊಲಂಬೊ ಪ್ರವಾಸಕ್ಕೆ ತೆರಳಿದ್ದ 7 ಮಂದಿ ಜೆಡಿಎಸ್ ಮುಖಂಡರು
ಕೊಲಂಬೋ[ಏ.22]: ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ 5 ಮಂದಿ ಕನ್ನಡಿಗರ ದುರ್ಮರಣ ಹೊಂದಿದ್ದಾರೆ. ಚುನಾವಣೆ ಪ್ರಚಾರ ಮುಗಿಸಿದ್ದ 7 ಮಂದಿ ಜೆಡಿಎಸ್ ಮುಖಂಡರು ಪ್ರವಾಸಕ್ಕೆಂದು ಶ್ರೀಲಂಕಾಗೆ ತೆರಳಿದ್ದರು. ದುರಾದೃಷ್ಟವಶಾತ್ ಭಾನುವಾರದಂದು ನಡೆದ ಸ್ಫೋಟಕ್ಕೆ ಐವರು ಬಲಿಯಾಗಿದ್ದಾರೆ.
ಕೊಲಂಬೋದ ಶಾಂಗ್ರಿಲಾದಲ್ಲಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ 7 ಮಂದಿಯಲ್ಲಿ ಜೆಡಿಎಸ್ ಮುಖಂಡರಾದ ಹನುಮಂತರಾಯಪ್ಪ, ರಂಗಪ್ಪ, ಶಿವಕುಮಾರ್ ಲಕ್ಷ್ಮೀನಾರಾಯಣ್, ರಮೇಶ್ ದುರ್ಮರಣಕ್ಕೀಡಾಗಿದ್ದಾರೆ. ಇವರೆಲ್ಲರೂ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಪರ ಪ್ರಚಾರ ನಡೆಸಿದ್ದರು.
ಕೊಲಂಬೊದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ JDS ನ ಏಳು ಮಂದಿಯ ತಂಡ ಬಾಂಬ್ ಸ್ಫೋಟದ ನಂತರ ಕಾಣೆಯಾಗಿದ್ದಾರೆ. ಇದನ್ನು ಕೇಳಿ ನನಗೆ ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ
— H D Kumaraswamy (@hd_kumaraswamy) April 22, 2019
ಸಿಎಂ ಕುಮಾರಸ್ವಾಮಿ ಜೆಡಿಎಸ್ ಮುಖಂಡರ ಸಾವಿಗೆ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ 'ಘಟನೆ ಸುದ್ದಿ ಕೇಳಿ ನನಗೆ ಇನ್ನಿಲ್ಲದ ಆಘಾತ, ನೋವಾಗಿದೆ. ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಾಣೆಯಾಗಿರುವವರ ಪತ್ತೆಗೆ ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ' ಎಂದಿದ್ದಾರೆ.
External affairs Min. @SushmaSwaraj has confirmed the death of two Kannadigas,KG Hanumantharayappa and M Rangappa, in the bomb blasts in #Colombo.
— H D Kumaraswamy (@hd_kumaraswamy) April 22, 2019
I am deeply shocked at the loss of our JDS party workers, whom I know personally. We stand with their families in this hour of grief
ಮೃತಪಟ್ಟವರ ವಿವರ :
ಶಿವಣ್ಣ, ಲಕ್ಷ್ಮೀನಾರಾಯಣ, ಹನುಮಂತರಾಯಪ್ಪ, ರಂಗಪ್ಪ, ರಮೇಶ್
ನಾಪತ್ತೆಯಾದವರು :
ಮಾರೇಗೌಡ- ಅಡಕಮಾರನಹಳ್ಳಿ ಗ್ರಾಮ, ಬೆಂಗಳೂರು ಉತ್ತರ ತಾಲೂಕು
ಪುಟ್ಟರಾಜು - ಹಾರೋಕ್ಯಾತನಹಳ್ಳಿ, ಬೆಂಗಳೂರು ಉತ್ತರ