ಅಯೋಧ್ಯೆ ವಿಚಾರಣೆ ಜನ 29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್!
ಅಯೋಧ್ಯೆ ವಿಚಾರಣೆ ಸದ್ಯಕ್ಕಿಲ್ಲ ಎಂದ ಸುಪ್ರೀಂ ಕೋರ್ಟ್| ಜನವರಿ 29ಕ್ಕೆ ಮುಂದೂಡಿದ ಸರ್ವೋಚ್ಛ ನ್ಯಾಯಾಲಯ| ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ರಂಜನ್ ಗಗೋಯ್ ನೇತೃತ್ವದ ಪೀಠ| ಪಂಚ ಸದಸ್ಯ ಪೀಠದಿಂದ ಮಹತ್ವದ ನಿರ್ಣಯ
ನವದೆಹಲಿ(ಜ.10): ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.
"
Supreme Court fixes January 29 as the next date of hearing https://t.co/AIQ6k0g20U
— ANI (@ANI) January 10, 2019
ಇಂದು ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ರಂಜನ್ ಗಗೋಯ್ ಅವರು, 'ಅಯೋಧ್ಯೆ ಪ್ರಕರಣದಲ್ಲಿ ಇಂದು ವಿಚಾರಣೆ ನಡೆಯುವುದಿಲ್ಲ. ವಿಚಾರಣೆಯ ಅರ್ಜಿಗಳನ್ನು ಮಾತ್ರ ನಾವು ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಜ.4ರಂದು ಒಂದೇ ನಿಮಿಷದಲ್ಲಿ ಅರ್ಜಿ ವಿಚಾರಣೆ ನಡೆಸಿದ್ದ ರಂಜನ್ ಗೊಗೊಯ್ ನೇತೃತ್ವದ ಪೀಠ, 'ಅಯೋಧ್ಯೆ ಪ್ರಕರಣದ ತನಿಖೆ ವಿಚಾರದಲ್ಲಿ ಮುಂದಿನ ಆದೇಶವನ್ನು ಜನವರಿ 10ರಂದು ನೀಡಲಾಗುವುದು' ಎಂದಿತ್ತು.
#AyodhyaHearing: Supreme Court registry will need to give a report on by when will all documents be translated and the case be ready for hearing. https://t.co/0Ku0MNnwS2
— ANI (@ANI) January 10, 2019
ಅಲ್ಲದೆ, ಪ್ರಕರಣವನ್ನು ಹೊಸ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡುವುದಾಗಿ ಕೂಡ ಸುಪ್ರೀಂ ಕೋರ್ಟ್ ತಿಳಿಸಿತ್ತು. ಹೊಸ ಪೀಠದಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಉದಯ್ ಲಲಿತ್, ಎಸ್.ಎ ಬೊಬ್ಡೆ, ಎಸ್.ವಿ. ರಮಣ್ ಇದ್ದಾರೆ. ರಂಜನ್ ಗೊಗೊಯಿ ಈ ಪೀಠದ ನೇತೃತ್ವ ವಹಿಸಿದ್ದರು.
ಅಯೋಧ್ಯೆ ವಿಚಾರಣೆ: ತ್ರಿಸದಸ್ಯ ಪೀಠ ರಚನೆ ನಿರೀಕ್ಷೆ
ರಾಮಮಂದಿರ ಬಗ್ಗೆ ಮೊದಲ ಬಾರಿ ಮೋದಿ ಮಾತು; ಏನಂದ್ರು ಪ್ರಧಾನಿ?
ಅಯೋಧ್ಯ ವಿವಾದ: ಜ.4 ಕ್ಕೆ ವಿಚಾರಣೆ