Asianet Suvarna News Asianet Suvarna News

ದೇವಸ್ಥಾನಕ್ಕೆ ಹೋಗುವವರೆಲ್ಲಾ ಹಿಂದೂಗಳಲ್ಲ: ಸಿಎಂ

ಅನ್ನ ಭಾಗ್ಯ ಯೋಜನೆಯಿಂದ ಯಾರೂ  ಸೋಮಾರಿಗಳಾಗಿಲ್ಲ.  ಎಲ್ಲರೂ ಕಾಯಕ ಮಾಡಬೇಕು ಹಾಗೆ ದಾಸೋಹ ಕೂಡ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

They are not only Hindus who going to Temple

ಬೆಂಗಳೂರು (ಜ.18): ಅನ್ನ ಭಾಗ್ಯ ಯೋಜನೆಯಿಂದ ಯಾರೂ  ಸೋಮಾರಿಗಳಾಗಿಲ್ಲ.  ಎಲ್ಲರೂ ಕಾಯಕ ಮಾಡಬೇಕು ಹಾಗೆ ದಾಸೋಹ ಕೂಡ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇಷ್ಟುದಿನ ದುಡಿದುಕೊಂಡು ತಿಂದವರು ಕೆಲ ದಿನ ದುಡಿಯದೇ ತಿಂದರೆ ಏನ್ ತಪ್ಪು ? ಬಡವರು ಕೆಲ ದಿನ ರೆಸ್ಟ್ ಮಾಡ್ಲಿ ಬಿಡಿ ಎಂದು  ತಮ್ಮ ಮಹತ್ವಾಕಾಂಕ್ಷೆಯ  ಅನ್ನ ಭಾಗ್ಯ ಯೋಜನೆಯನ್ನು  ಸಮರ್ಥಿಸಿಕೊಂಡಿದ್ದಾರೆ.   ಸಂಪ್ರದಾಯದ ಹೆಸರಲ್ಲಿ ಕಂದಾಚಾರ ,ಮೌಡ್ಯಗಳು ಹೆಚ್ಚಾಗುತ್ತಿವೆ.   ನನ್ನ ಕಾರಿನ ಮೇಲೆ ಕಾಗೆ ಕುಳಿತರೆ  ಅದನ್ನ ಶನಿ ಕಾಟ ಅಂತಾ ಕರೆದರು.  ಪಾಪ ಆ ಕಾಗೆಗೆ ಒಂದು ಕಣ್ಣು ಕಾಣ್ತಿರ್ಲಿಲ್ಲಾ ಹಾಗಾಗಿ  ನನ್ನ ಕಾರಿನ ಮೇಲೆ  ಕುಳಿತಿತ್ತು.  ಈ ಮೌಡ್ಯಗಳನ್ನ ತಡೆಯಲು ಮೌಡ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದಿದ್ದೇವೆ. ದೇವಸ್ಥಾನಕ್ಕೆ ಹೋಗುವವರೆಲ್ಲಾ ಹಿಂದೂಗಳಲ್ಲ, ಮನುಷ್ಯತ್ವ ಇಲ್ಲದವನು ಹಿಂದೂ ಆಗಲಾರ.  ಮಾಧ್ಯಮಗಳೂ ಈ ವಿಚಾರದಲ್ಲಿ ಜಾಗೃತಿ ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ.

Follow Us:
Download App:
  • android
  • ios