Asianet Suvarna News Asianet Suvarna News

ಪಕ್ಷ ಅಧಿಕಾರಕ್ಕೆ ಬಂದರೆ ಯುಪಿ ರೀತಿ ಎನ್ಕೌಂಟರ್‌: ಬಿಜೆಪಿ ಶಾಸಕಿ ಆಫರ್‌!

ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದ ಮಾದರಿಯಲ್ಲಿ ಎನ್‌ಕೌಂಟರ್‌ ನಡೆಸಲಾಗುವುದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರಾಜಕುಮಾರಿ ಕೇಸರಿ ಆಫರ್‌ ನೀಡಿದ್ದಾರೆ

Will order UP style encounters if voted to power says BJP West Bengal vice president
Author
Kolkata, First Published Dec 16, 2018, 8:31 AM IST

ಕೋಲ್ಕತಾ[ಡಿ.16]: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದ ಮಾದರಿಯಲ್ಲಿ ಎನ್‌ಕೌಂಟರ್‌ ನಡೆಸಲಾಗುವುದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರಾಜಕುಮಾರಿ ಕೇಸರಿ ಆಫರ್‌ ನೀಡಿದ್ದಾರೆ.

ಬುದ್ರ್ವಾನ್‌ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಸರಿ, ರಾಜ್ಯದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದ ಬಳಿಕ ಗೂಂಡಾಗಳ ಹಾವಳಿ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ, ಎನ್‌ಕೌಂಟರ್‌ ನಡೆಸಿ ಗೂಂಡಾಗಳಿಗೆ ಪಾಠ ಕಲಿಸಿದಂತೆ ಪಾಠ ಕಲಿಸಲಾಗುವುದು. ಈಗಾಗಲೇ ಎನ್‌ಕೌಂಟರ್‌ ಮಾಡಬೇಕಾದ ವ್ಯಕ್ತಿಗಳ ಪಟ್ಟಿತಯಾರಿಸುವಂತೆ ಕೇಂದ್ರ ನಾಯಕರು, ರಾಜ್ಯ ನಾಯಕರುಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಕೇಸರಿ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌ ಕೂಡಾ ಸಮರ್ಥಿಸಿಕೊಂಡಿದ್ದಾರೆ. ಗೂಂಡಾಗಳನ್ನು ಗಂಗಾಜಲದ ಮೂಲಕ ಶುದ್ದೀಕರಿಸಲು ಸಾಧ್ಯವಿಲ್ಲ. ಗೂಂಡಾಗಳಿಗೆ ಅವರದ್ದೇ ರೀತಿ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.

Follow Us:
Download App:
  • android
  • ios