ಚಂಪಾ, ಚೊಕ್ಕಾಡಿ, ಅನಗಳ್ಳಿಗೆ ದೆಹಲಿ ಕನ್ನಡ ಸಂಘ ಪ್ರಶಸ್ತಿ
ದೆಹಲಿ ಕರ್ನಾಟಕ ಸಂಘದ ಡಾ.ಸರೋಜಿನಿ ಮಹಿಷಿ ಪ್ರಶಸ್ತಿಗೆ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿಗೆ
ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಕನ್ನಡಿಗರಿಗೆ ಮತ್ತೊಂದು ಗೌರವ ಸಲ್ಲಿಕೆಯಾಗಿದೆ.
ನವದೆಹಲಿ[ನ.22] ದೆಹಲಿ ಕರ್ನಾಟಕ ಸಂಘದ ಡಾ.ಸರೋಜಿನಿ ಮಹಿಷಿ ಪ್ರಶಸ್ತಿಗೆ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿಗೆ
ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಅಲ್ಲದೇ ಕನ್ನಡ ಭಾರತಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕರ್ಮಿ ಸುರೇಶ್ ಅನಗಳ್ಳಿ ಅವರಿಗೆ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಪತ್ರಿಕಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಈ ಮೂರೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸ್ಮರಣಿಕೆ ಮತ್ತು ದೆಹಲಿಗೆ ವಿಮಾನಯಾನ ಪ್ರಯಾಣ ವೆಚ್ಚವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 16 ರಂದು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.