ಪ್ರತಾಪ್ ಸಿಂಹ ಪ್ರತಿಸ್ಪರ್ಧಿ ಯಾರು..? ಬಹಿರಂಗಪಡಿಸಿದ H ವಿಶ್ವನಾಥ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿರುವುದನ್ನು ಎಚ್.ವಿಶ್ವನಾಥ್ ಸುಳಿವು ನೀಡಿದ್ದಾರೆ. ಅಷ್ಟೇ ಅಲ್ಲದೇ ಅಭ್ಯರ್ಥಿ ಹೆಸರನ್ನು ಬಹಿರಂಗಪಡಿಸಿದ್ದಾರೆ.
ಮೈಸೂರು,(ಜ.27): ಮೈಸೂರು- ಕೊಡಗು ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಫಿಕ್ಸ್ ಆಗಿದ್ದು, ಹುಣಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅಭ್ಯರ್ಥಿ ಹೆಸರು ಘೋಷಿಸಿದ್ದಾರೆ.
ಹುಣಸೂರಿನಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ದೋಸ್ತಿ ಸರ್ಕಾರದ ಸೀಟು ಹಂಚಿಕೆ ಬಹುತೇಕ ಪೂರ್ಣಗೊಂಡಿದೆ.
ಲೋಕಸಭೆ ಚುನಾವಣೆ: ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ತಳಮಳ!
ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಮೈಸೂರು- ಕೊಡಗು ಲೋಕಸಭಾ ಅಭ್ಯರ್ಥಿ ಎಂದು ಹೇಳಿದರು. ಈ ಮೂಲಕ ಮೈಸೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿರುವುದನ್ನು ಬಹಿರಂಗಪಡಿಸಿದ್ದಾರೆ.
ವಿಶ್ವನಾಥ್ ಅವರ ಈ ಹೇಳಿಕೆಯನ್ನು ನೋಡಿದ್ರೆ ಈಗಾಗಲೇ ಮೈಸೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿರುವುದು ಮಾತ್ರವಲ್ಲದೇ ಅಭ್ಯರ್ಥಿಯನ್ನು ಫೈನಲ್ ಆಗಿದೆ.
ರಂಗೇರಿತು ಲೋಕಸಭಾ ಎಲೆಕ್ಷನ್ : ಮೊದಲ ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ
ವಿಶ್ವನಾಥ್ ಘೋಷಿಸಿದಂತೆ ವಿಜಯಶಂಕರ್ ಹಾಗೂ ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ನಡುವೆ ನೇರ ಹಣಾಹಣಿ ನಡೆಯಲಿದೆ.