ಬನ್ನಿ, ಬನ್ನಿ..ಇನ್ನು ಕೆಲ್ಸ ಮಾಡಿ: ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!
‘ಎಲ್ಲರಿಗೂ ವೆಲ್ಕಮ್ ಟು ಕರ್ನಾಟಕ’| ಆಪರೇಶನ್ ಸಂಕ್ರಾಂತಿ ಫೇಲ್ ಆದ ಪರಿಣಾಮ| ರಾಜ್ಯಕ್ಕೆ ಮರಳುತ್ತಿರುವ ಬಿಜೆಪಿ ಶಾಸಕರು| ಹರಿಯಾಣದ ಸ್ಟಾರ್ ಹೋಟೆಲ್ನಲ್ಲಿರುವ ಬಿಜೆಪಿ ಶಾಸಕರು| ಮರಳಿ ಬಂದ ಶಾಸಕರಿಗೆ ಕಾಂಗ್ರೆಸ್ ವ್ಯಂಗ್ಯಭರಿತ ವೆಲ್ಕಮ್| ಇನ್ನಾದರೂ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಲು ಸಲಹೆ| ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್
ಬೆಂಗಳೂರು(ಜ.17): ಕಳೆದ ಕೆಲವು ದಿನಗಳಿಂದ ಹರಿಯಾಣದ ಸ್ಟಾರ್ ಹೋಟೆಲ್ನಲ್ಲಿ ಬೀಡು ಬಿಟ್ಟಿರುವ ಬಿಜೆಪಿ ಶಾಸಕರು ಒಬ್ಬೊಬ್ಬರಾಗಿ ಮರಳಿ ರಾಜ್ಯಕ್ಕೆ ಬರುತ್ತಿದ್ದಾರೆ.
ಈ ಮಧ್ಯೆ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ವ್ಯಂಗ್ಯಭರಿತ ಸ್ವಾಗತ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ಲಕ್ಸುರಿ ಹೋಟೆಲ್ ನಲ್ಲಿ ಜಾಲಿ ಹಾಲಿ ಡೇ ಮುಗಿಸಿ ಬರುತ್ತಿರುವ ಬಿಜೆಪಿ ಶಾಸಕರಿಗೆ ಸ್ವಾಗತ. ಇನ್ನು ಮುಂದಾದರೂ ಈ ಶಾಸಕರು ತಮ್ಮ ಕ್ಷೇತ್ರಗಳಿಗೆ ತೆರಳಿ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಾರೆ ಎಂಬ ವಿಶ್ವಾಸವಿದೆ..’ ಎಂದು ಕಿಚಾಯಿಸಿದ್ದಾರೆ.
We extend a hearty welcome to all Karnataka BJP MLAs who are returning home after an extended holiday at a luxury resort near Delhi. Now that they are sufficiently rejuvenated let us hope they will attend to the work of their constituencies which they have neglected for long.
— KPCC President (@KPCCPresident) January 17, 2019
ಆಪರೇಶನ್ ಸಂಕ್ರಾಂತಿ ಹೆಸರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತ ತರುವ ಮೂಡ್ನಲ್ಲಿದ್ದ ಬಿಜೆಪಿ, ಇದೀಗ ಮತ್ತೊಮ್ಮೆ ತನ್ನ ತಂತ್ರದಲ್ಲಿ ವಿಫಲತೆ ಕಂಡಿದೆ. ಈ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಬೀಡು ಬಿಟ್ಟಿದ್ದ ಬಿಜೆಪಿ ಶಾಸಕರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಮರಳಿ ರಾಜ್ಯಕ್ಕೆ ವಾಪಸ್ ಬರುತ್ತಿದ್ದಾರೆ.