ಬಿಜೆಪಿಗೆ ಬಿಗ್ ಶಾಕ್ : ಕಾಂಗ್ರೆಸ್ ಸೇರಿದ ಸಂಸದ
ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಬಿಜೆಪಿ ಹಿರಿಯ ಮುಖಂಡರೋರ್ವರು ಇದೀಗ ಗುಡ್ ಬೈ ಹೇಳಿ ಕೈ ಹಿಡಿದಿದ್ದಾರೆ. ಇದರಿಂದ ರಾಜಸ್ಥಾನ ಚುನಾವಣಾ ಗೆಲುವಿಗಾಗಿ ಶ್ರಮಿಸುತ್ತಿರುವ ಬಿಜೆಪಿಗೆ ಇದೊಂದು ಆಘಾತವಾಗಿದೆ.
ಜೈಪುರ : ದೇಶದ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.
ಬಿಜೆಪಿ ಮುಖಂಡ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಇದೀಗ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
2014ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಮೀನ ದೌಸಾ ಕ್ಷೇತ್ರದ ಸಂಸದರಾಗಿದ್ದರು.
ರಾಜಸ್ಥಾನದಲ್ಲಿ ಮುಂದಿನ ಡಿಸೆಂಬರ್ 7 ರಂದು ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಪಕ್ಷಕ್ಕೆ ಶಾಕ್ ನೀಡಿದಂತಾಗಿದೆ.
ಹರೀಶ್ ಮೀನಾ ಅವರು ನಮ್ಮ ಪಕ್ಷವನ್ನು ಸೇರ್ಪಡೆಯಾಗಿರುವುದು ಸಂತೋಷವನ್ನುಂಟು ಮಾಡಿದೆ. ಅವರಿಗೆ ನಮ್ಮ ಪಕ್ಷಕ್ಕೆ ಸ್ವಾಗತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.