ಲಂಕಾ ಮಾಜಿ ನಾಯಕ ಅರ್ಜುನ್ ರಣತುಂಗಾ ಆರೆಸ್ಟ್..!
ಮೃತಪಟ್ಟ ವ್ಯಕ್ತಿಯನ್ನು 34 ವರ್ಷದ ಮೇಲೀ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ಕೊಲಂಬೊದಲ್ಲಿರುವ ರಾಷ್ಟ್ರೀಯ ಆಸ್ಫತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ್ದಾನೆ ಎನ್ನಲಾಗಿದೆ.
ಕೊಲಂಬೊ[ಅ.29]: ವ್ಯಕ್ತಿಯೋರ್ವನ ಹತ್ಯೆ ಮಾಡಿದ ಆರೋಪದಡಿ ಶ್ರೀಲಂಕಾ ಮಾಜಿ ನಾಯಕ, ಪೆಟ್ರೋಲಿಯಂ ಸಚಿವ ಅರ್ಜುನ್ ರಣತುಂಗಾ ಅವರನ್ನು ಬಂಧಿಸಲಾಗಿದೆ.
ಶ್ರೀಲಂಕಾದಲ್ಲಿ ರಾಜಕೀಯ ಅರಾಜಕತೆ ಮುಂದುವರೆದಿದ್ದು, ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಅರ್ಜುನ್ ರಣತುಂಗಾ ಅವರ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಲಾಗಿದೆ. ಈ ಕುರಿತಂತೆ ಕ್ಷಿಪ್ರ ಬೆಳವಣಿಗೆಯಲ್ಲಿ ಮಾಜಿ ಕ್ರಿಕೆಟಿಗ ರಣತುಂಗಾ ಅವರನ್ನು ಬಂಧಿಸಲಾಗಿದೆ.
ಮೃತಪಟ್ಟ ವ್ಯಕ್ತಿಯನ್ನು 34 ವರ್ಷದ ಮೇಲೀ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ಕೊಲಂಬೊದಲ್ಲಿರುವ ರಾಷ್ಟ್ರೀಯ ಆಸ್ಫತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ್ದಾನೆ ಎನ್ನಲಾಗಿದೆ.
ಕಳೆದ ಶುಕ್ರವಾರದಿಂದ ದ್ವೀಪರಾಷ್ಟ್ರದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಕೆಳಗಿಳಿಸಿ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಷೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಬಳಿಕ ಹಿಂಸಾಚಾರ ಭುಗಿಲೆದ್ದಿದೆ.
1996ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅರ್ಜುನ್ ರಣತುಂಗಾ ಶ್ರೀಲಂಕಾ ತಂಡವನ್ನು ಮುನ್ನಡೆಸಿ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟಿದ್ದರು.