Asianet Suvarna News Asianet Suvarna News

ಮುರುಘಾ ಶರಣರನ್ನು ಬೇರೆ ರಾಜ್ಯದಲ್ಲಿರಿಸಿ ಸಾಕ್ಷಿಗಳ ವಿಚಾರಣೆ ಮಾಡಬೇಕು: ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮನವಿ

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಾಗದಂತೆ ಅವರನ್ನು ಬೇರೆ ರಾಜ್ಯದಲ್ಲಿಟ್ಟು ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಮೈಸೂರು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಮನವಿ ಮಾಡಿದ್ದಾರೆ.

Murugha Seer should be kept in another state then interrogate Witnesses Odanadi stanley pleads sat
Author
First Published Apr 23, 2024, 7:45 PM IST

ಮೈಸೂರು (ಏ.23): ರಾಜ್ಯದಲ್ಲಿ ಅತ್ಯಂತ ಗಂಭೀರ ಪ್ರಕರಣವಾಗಿರುವ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ಸಾಕ್ಷಿಗಳ ಮೇಲೆ ಪ್ರಭಾವ ಬೀರುಬಹುದು. ಹೀಗಾಗಿ, ಅವರನ್ನು ಬೇರೆ ರಾಜ್ಯದಲ್ಲಿಟ್ಟು ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಮೈಸೂರು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಗಂಭೀರ ಪ್ರಕರಣವಾಗಿರುವ ಹಾಗೂ ಅತ್ಯಂತ ಪ್ರಭಾವಿಯೂ ಆಗಿರುವ ಚಿತ್ರದುರ್ಗದ ಮುರುಘರಾಜೇಂದ್ರ ಮಠದ ಮುರುಘಾ ಶರಣರನ್ನು ಪೋಕ್ಸೋ ಕೇಸ್‌ನಲ್ಲಿ ಪುನಃ ಜೈಲಿಗೆ ಕಳಿಸಿದ ಸುಪ್ರೀಂ ಕೋರ್ಟ್‌ ಆದೇಶವನ್ನು ಸಂತಸದಿಂದ ಸ್ವಾಗತಿಸುತ್ತೇವೆ. ಆದರೆ, ಸಾಕ್ಷಿಗಳ ಪೂರ್ಣ ವಿಚಾರಣೆ ಮುಕ್ತಾಯ ಆಗುವವರೆಗೂ ಮುರುಘಾ ಶರಣರನ್ನು ಬೇರೆ ರಾಜ್ಯದಲ್ಲಿ ಇರಿಸಬೇಕು. ಇಲ್ಲವಾದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಮುರುಘಾ ಶ್ರೀ ಮತ್ತೆ ಜೈಲಿಗೆ; ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಮುರುಘ ಶ್ರೀಗಳಿಗೆ ಮತ್ತೆ ನ್ಯಾಯಾಂಗ ಬಂಧನ ಆದೇಶ ಮಾಡಿರುವುದು ಮಹತ್ತರವಾದ ಮಕ್ಕಳ ಪರವಾದ ತೀರ್ಪು. ನ್ಯಾಯಾಲಯಕ್ಕೆ ಕೃತಜ್ಞತೆ  ಸಲ್ಲಿಸುತ್ತೇನೆ. ಶೋಷಣೆಗೊಳಪಟ್ಟ ಮಕ್ಕಳಿಗೆ ನ್ಯಾಯ ಸಿಗುತ್ತೆ ಅನ್ನುವುದಕ್ಕೆ ಇಂತಹ ಆದೇಶಗಳು ಸಾಕ್ಷಿ. ಸಾಕ್ಷಿಗಳ ವಿಚಾರಣೆ ಮಾಡದೆ ಜಾಮೀನು ಕೊಡಲಾಗಿತ್ತು. 2022ರಲ್ಲಿ ನಡೆದ ಪ್ರಕರಣವಾದರೂ ಸಾಕ್ಷಿಗಳ ವಿಚಾರಣೆ ಆಗಿರಲಿಲ್ಲ. ಮುರುಘ ಶ್ರೀ ಪ್ರಬಲವಾದ ವ್ಯಕ್ತಿಯಾಗಿದ್ದು, ಇಡೀ ರಾಜ್ಯದಲ್ಲಿ ತಮ್ಮ ಪ್ರಾಬಲ್ಯ ಹೊಂದಿರುವಂತವರು. ಈ ಪ್ರಕರಣದಲ್ಲಿ ಇವರ ಜೊತೆ ಇದ್ದವರಿಗೂ ಕೂಡ ಜಾಮೀನು ಸಿಕ್ಕಿದೆ. ಹೀಗಾಗಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದರು.

'ನೀವು ಜಾಹೀರಾತು ನೀಡೋವಷ್ಟೇ ದೊಡ್ಡದಾಗಿ ಕ್ಷಮಾಪಣೆ ಪ್ರಿಂಟ್‌ ಮಾಡ್ಸಿದ್ದೀರಾ?' ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್‌ ಪ್ರಶ್ನೆ!

ಮುರುಘಾ ಶ್ರೀಗಳಿಗೆ ಜಾಮೀನು ಸಿಕ್ಕಿದ್ದಷ್ಟೆ ಅಲ್ಲದೆ ಅವರೇ ಸ್ವತಃ ಈಗ ಮಠದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಚಿತ್ರದುರ್ಗದಿಂದ ಹೊರಗಿದ್ದರೂ, ಅವರ ಪರವಾಗಿರುವವರು ಮಠದಲ್ಲೇ ಇದ್ದು ಕೆಲಸ ನೋಡಿಕೊಳ್ಳುತ್ತಿದ್ದಾರೆ. ಈ‌ ಕಾರಣದಿಂದ ಆರೋಪಿಯನ್ನ ಬೇರೆ ರಾಜ್ಯದಲ್ಲಿ ಇರಿಸಿ ವಿಚಾರಣೆಗೊಳಪಡಿಸಬೇಕು. ಈ ನಿಟ್ಟಿನಲ್ಲಿ ನಾವು ಮತ್ತಷ್ಟು ಹೋರಾಟ ಮಾಡುತ್ತೇವೆ. ಈ ಪ್ರಕರಣ ಎಲ್ಲಾ ಧರ್ಮದ ಮಠಗಳಿಗೆ ಚಾಟಿ  ಬೀಸಿದಂತಾಗಿದೆ. ಇದು ಗಂಭೀರವಾದ ಪ್ರಕರಣ. ಈ ಕಾರಣದಿಂದ ತನಿಖೆಯನ್ನ ಸಿಬಿಐ ಮಾಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಹೇಳಿದ್ದಾರೆ.

Follow Us:
Download App:
  • android
  • ios