ಯಾರನ್ನೂ ಬಂಧಿಸಿಟ್ಟಿಲ್ಲ: ನಿತ್ಯಾನಂದ| ಮಕ್ಕಳು/ಸನ್ಯಾಸಿಯರ ಭೇಟಿಗೆ ಕುಟುಂಬಗಳಿಗೆ ತಡೆ ಒಡ್ಡಿಲ್ಲ| ಅದು ಅವರ ವೈಯಕ್ತಿಕ ಸ್ವಾತಂತ್ರ್ಯ, ನಿರ್ಧಾರ: ವಿವಾದಿತ ಸ್ವಾಮಿ

ಅಹಮದಾಬಾದ್‌[ನ.22]: ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಅಪಹರಿಸಿ, ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ಕಿರುಕುಳ ನೀಡುತ್ತಿದ್ದಾನೆ ಎಂದು ಬೆಂಗಳೂರು ನಿವಾಸಿ ಜನಾರ್ದನ ಶರ್ಮಾ ಅವರು ಮಾಡಿರುವ ಆರೋಪ ಸಂಬಂಧ ನಿತ್ಯಾನಂದ ಮೊದಲ ಪ್ರತಿಕ್ರಿಯೆ ನೀಡಿದ್ದಾನೆ. ತಾನು ಯಾರನ್ನೂ ಬಂಧನದಲ್ಲಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿತ್ಯಾನಂದ ಪರಾರಿ!: ಗುಜರಾತ್‌ ಪೊಲೀಸರಿಂದ ಸ್ಫೋಟಕ ಮಾಹಿತಿ

ಎರಡು ದಿನಗಳ ಹಿಂದೆ ಯುಟ್ಯೂಬ್‌ನಲ್ಲಿ 1.39 ಗಂಟೆಯ ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ, ‘ಯಾವುದೇ ಮಕ್ಕಳು ಅಥವಾ ಸನ್ಯಾಸಿನಿಯರನ್ನು ಅವರ ಕುಟುಂಬ ವರ್ಗ ಭೇಟಿ ಮಾಡದಂತೆ ತಡೆಯೊಡ್ಡಲಾಗಿಲ್ಲ. ಎಲ್ಲ ಗೊಂದಲಗಳನ್ನೂ ನಾನು ಬಗೆಹರಿಸುತ್ತಿದ್ದೇನೆ. ನಾನಾಗಲೀ ಅಥವಾ ನನ್ನ ಆಡಳಿತ ವರ್ಗವಾಗಲೀ ಯಾರನ್ನೂ ತಡೆದಿಲ್ಲ. ಇದು ಅವರ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ನಿರ್ಧಾರವಾಗಿದೆ’ ಎನ್ನುವ ಮೂಲಕ ಸನ್ಯಾಸಿನಿಯರೇ ಅವರ ಬಂಧುಗಳನ್ನು ಭೇಟಿ ಮಾಡುತ್ತಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾನೆ.

ಮಕ್ಕಳಿಗೆ ನಿತ್ಯಾ ಏನ್ಮಾಡ್ತಾನೆ? ವಿಡಿಯೋದಲ್ಲಿ ಕರ್ಮಕಾಂಡ ಬಿಚ್ಚಿಟ್ಟ ಮಾಜಿ ಶಿಷ್ಯೆ

ರಬೇತುದಾರರಲ್ಲಿ ಏನಾದರೂ ತೊಡಕುಗಳು ಇದ್ದರೆ ಇಡೀ ಸಂಘದ ಮೇಲೆಯೇ ದಾಳಿ ಮಾಡಲಾಗುತ್ತದೆ. ಹಿಂದು ವಿರೋಧಿ ಗುಂಪಿನ ಜತೆಗೂಡಿ ಹಿಂದುತ್ವವನ್ನೇ ಪತನ ಮಾಡಲು ಯತ್ನಿಸುತ್ತಾರೆ ಎಂದೂ ಹೇಳಿದ್ದಾನೆ. ಇದೇ ವೇಳೆ, ಪೊಲೀಸರು ನನ್ನ ಆಶ್ರಮದ ವಿರುದ್ಧ ಬೇಟೆಯಾಡುತ್ತಿದ್ದಾರೆ. ಆದರೆ ನನ್ನ ಗುಜರಾತಿ ಭಕ್ತರು ಅತ್ಯುತ್ತಮ. ನಿಷ್ಠರು. ಅವರ ನಿಷ್ಠೆ ಅಸಾಧಾರಣ ಹಾಗೂ ಪರಿಪೂರ್ಣ ಎಂದೂ ತಿಳಿಸಿದ್ದಾನೆ.

21 ವರ್ಷದ ಹೆಣ್ಣುಮಕ್ಕಳ ಒತ್ತೆ ಇಟ್ಟುಕೊಂಡ ಈಗ ನಿತ್ಯಾ ಎಲ್ಲಿದ್ದಾನೆ?

ಬಿಡದಿ ದೇವಮಾನವನ ಅಸಲಿ ರೂಪ, ನಿತ್ಯಾನಿಗೆ ಶಿಷ್ಯನಿಂದಲೇ ಡಿಚ್ಚಿ!