Asianet Suvarna News Asianet Suvarna News

ತುಮಕೂರು: ದೇವರ ಪ್ರಸಾದ ಸ್ವೀಕರಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ಪ್ರಸಾದ ದುರಂತ ಮಾಸವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದೇವಸ್ಥಾನದ ಪ್ರಸಾದ ದುರಂತ ಸಂಭವಿಸಿದೆ.

More Than 40 Devotees hospitalised after consuming 'prasad' at chinnappanahalli
Author
Bengaluru, First Published Apr 28, 2019, 6:41 PM IST

ತುಮಕೂರು, [ಏ.28]: ದೇವರ ಪ್ರಸಾದ ಸೇವಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ.

ಚಿನ್ನಪ್ಪನಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಇಂದು [ಭಾನುವಾರ] ಹರಿಸೇವೆ ಕಾರ್ಯಕ್ರಮ ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಅನ್ನಪ್ರಸಾದ ವಿತರಿಸಲಾಗಿತ್ತು. ಈ ಪ್ರಸಾದ ಸ್ವೀಕರಿಸಿದ ಭಕ್ತರಲ್ಲಿ 40ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

ಸುಳ್ವಾಡಿ ವಿಷ ಪ್ರಕರಣ: ಪ್ರಸಾದದಲ್ಲಿತ್ತು ಮಾರಾಣಾಂತಿಕ ಕೀಟನಾಶಕ

ಅಸ್ವಸ್ಥಗೊಂಡವರನ್ನು  ಕೂಡಲೇ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಭಕ್ತರಲ್ಲಿ ಆತಂಕ ಮೂಡಿದೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದಲ್ಲಿ ಕೆಲತಿಂಗಳ ಹಿಂದೆ ದುಷ್ಕರ್ಮಿಗಳು ಪ್ರಸಾದಕ್ಕೆ ವಿಷ ಬೆರೆಸಿದ್ದರಿಂದ, ಅದನ್ನು ಸೇವಿಸಿದ 17ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಶಿರಾದಲ್ಲೂ ಅಂಥದ್ದೇ ಘಟನೆ ನಡೆದಿರುವುದು ವಿಪರ್ಯಾಸ.

Follow Us:
Download App:
  • android
  • ios