Asianet Suvarna News Asianet Suvarna News

Love Jihad: ಶಾಕಿಂಗ್‌ ! ಲವ್ ಜಿಹಾದ್‌ನ ಮತ್ತೊಂದು ಕರಾಳ ಮುಖ ಅನಾವರಣ: ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌!

ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಪೀಡಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಮತಾಂತರಕ್ಕೆ ಯತ್ನ ನಡೆಸುತ್ತಿದ್ದ ಹಲವರ ವಿರುದ್ಧ ಇದೀಗ ದೂರು ದಾಖಲಾಗಿದೆ. 

ಕರ್ನಾಟಕದಲ್ಲಿ ಇತ್ತೀಚೆಗೆ ಲವ್‌ ಜಿಹಾದ್‌ (Love Jihad) ಸಂಬಂಧ ಹೊಸ ಹೊಸ ಬೆಳವಣಿಗಳು ಕಂಡು ಬರುತ್ತಿವೆ. ಇದರ ಭಾಗವಾಗಿ ಈಗ ಹಿಂದೂ ಯುವತಿಯರಷ್ಟೇ ಅಲ್ಲದೇ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಪೀಡಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಬೆಳಗಾವಿ(Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಂಡ ಕಿರಾಣಿ ಅಂಗಡಿ ಹೊಂದಿದ್ದು, ಪತಿ ಇಲ್ಲದಾಗ ಆಗಾಗ ಕಿರಾಣಿ ಅಂಗಡಿಯಲ್ಲಿ ಸಂತ್ರಸ್ತೆಯೇ ವ್ಯಾಪಾರ ನಡೆಸುತ್ತಿದ್ದರಂತೆ. ಈ ನಡುವೆ ಆರೀಫ್ ಬೇಪಾರಿ ಎಂಬ ವ್ಯಕ್ತಿ ಮಹಿಳೆ(Woman) ಬಳಿ ಬಂದು ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ ಎನ್ನಲಾಗಿದೆ. ಇದರ ಜೊತೆಗೆ ಆಕೆಯ ನಂಬರ್‌ ಪಡೆದುಕೊಂಡು ಪಡೆದು ಇಲ್ಲಸಲ್ಲದ ಆಮೀಷ ಒಡ್ಡಿದ್ದಾನಂತೆ. ಇದೆಲ್ಲಾ ಆದ ಮೇಲೆ ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯನ್ನು ಬೆಳಗಾವಿಗೂ ಕರೆತಂದು ‌ಲೈಂಗಿಕ ದೌರ್ಜನ್ಯ(Sexual Harassment) ಎಸಗಿದ್ದಾನೆ ಎನ್ನಲಾಗಿದೆ. ಬೆಳಗಾವಿಗೆ ಬಂದ ಬಳಿಕ ಆರೀಫ್‌ಗೆ ಐವರು ದುಷ್ಕರ್ಮಿಗಳು ಈ ಕೃತ್ಯಕ್ಕೆ ಸಾಥ್‌ ನೀಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ದುರಂತ ಎಂದರೆ ಲೈಂಗಿಕ ದೌರ್ಜನ್ಯದ ಫೋಟೋಗಳನ್ನು ಸೆರೆಹಿಡಿಟ್ಟುಕೊಂಡಿದ್ದ ದುಷ್ಕರ್ಮಿಗಳು, ಮಹಿಳೆಗೆ ಮತಾಂತರಗೊಳ್ಳಬೇಕೆಂದು ಪೀಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು, ಹಿಂದೂ ಸಂಪ್ರದಾಯ ಬಿಡಬೇಕು, ನಿತ್ಯ ಬುರ್ಖಾ ಧರಿಸುವ ಜೊತೆಗೆ ಐದು ಸಲ ನಮಾಜ್ ಮಾಡಬೇಕು ಎಂದು ಪೀಡಿಸುತ್ತಿದ್ದರಂತೆ. ಇದೆಲ್ಲಾ ಆದ ನಂತರಲ್ಲಿ ಮಹಿಳೆಯು ಅಲ್ಲಿಂದ ತಪ್ಪಿಸಿಕೊಂಡು ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಆರೋಪಿಗಳಾದ ಮುನವಳ್ಳಿ ಪಟ್ಟಣದ ಆರೀಫ್ ‌ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  Duplicate Shah Rukh Khan: ಚುನಾವಣಾ ಪ್ರಚಾರಕ್ಕೆ ಬಂದ್ರಾ ಶಾರುಖ್ ಖಾನ್..? ನಟನನ್ನು ನೋಡಿ ಜನರಿಗೆ ಶಾಕ್..!

Video Top Stories