
ಕೊರೋನಾ ವಾರಿಯರ್ಗೆ ಕಿರುಕುಳ; ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಆಶಾ ಕಾರ್ಯಕರ್ತೆ
ಚಿಕ್ಕಮಗಳೂರಿನಲ್ಲಿ ಕೊರೋನಾ ವಾರಿಯರ್ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬಾಳಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು (ಜೂ. 01): ಚಿಕ್ಕಮಗಳೂರಿನಲ್ಲಿ ಕೊರೋನಾ ವಾರಿಯರ್ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬಾಳಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
Add Asianetnews Kannada as a Preferred Source

ಬೆಂಗಳೂರಿಗೆ ಮಾರಕವಾಯ್ತಾ ಲಾಕ್ಡೌನ್ ಸಡಿಲಿಕೆ?
ಕೋವಿಡ್ 19 ವಿವವರ ಪಡೆಯಲು ಆಶಾ ಕಾರ್ಯಕರ್ತೆ ತೆರಳಿದ್ದ ವೇಳೆ ಚಂದ್ರಶೇಖರ್ ಎಂಬುವವರು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಲಸ ಮಾಡಲು ರಕ್ಷಣೆ ನೀಡುವಂತೆ ಆಶಾ ಕಾರ್ಯಕರ್ತೆ ಮನವಿ ಮಾಡಿಕೊಂಡಿದ್ದು, ನನಗೆ ನ್ಯಾಯ ಸಿಗದಿದ್ರೆ ಆತ್ಮಹತ್ಯೆಯೊಂದೇ ದಾರಿ ಎಂದಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.