ಈ ರಾಶಿಯವರಿಗಿಂದು ತಾಳ್ಮೆಯೇ ಶುಭದಾಯಕ

By Web DeskFirst Published Feb 23, 2019, 7:28 AM IST
Highlights

ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಯಾರಿಗೆಲ್ಲ ಇಂದು ಶುಭವಾಗಲಿದೆ? ಇಲ್ಲಿದೆ ಇಂದಿನ ದಿನ ಭವಿಷ್ಯ

ಮೇಷ: ಸಣ್ಣ ಮಟ್ಟದ ವ್ಯಾಪಾರಿಗಳಿಗೆ ಹೆಚ್ಚು ವಹಿವಾಟು ನಡೆಯಲಿದೆ. ಕೃಷಿಕರಿಗೆ ಲಾಭ. ದೊಡ್ಡವರ ಮಾತಿಗೆ ಹೆಚ್ಚು ಮಾನ್ಯತೆ ನೀಡಿ.

ವೃಷಭ: ಆರೋಗ್ಯ ಕೊಂಚ ಕೈ ಕೊಡುವ ಸಾಧ್ಯತೆ ಇದೆ. ಚಳಿಯ ಹೊಡೆತಕ್ಕೆ ಸಿಲುಕಿಕೊಳ್ಳುವಿರಿ. ದುಡಿಯುವ ವರ್ಗಕ್ಕೆ ಇಂದು ಶುಭ ಫಲ.

ಮಿಥುನ: ತಾಳ್ಮೆಯೇ ನಿಮಗೆ ಶುಭದಾಯಕವಾಗಲಿದೆ. ಸಂಜೆ ವೇಳೆಗೆ ಅಪರಿಚಿತರ ಭೇಟಿಯಾಗಲಿದೆ. ಅಂದುಕೊಂಡ ಕಾರ್ಯ ನೆರವೇರಲಿದೆ.

ಕಟಕ: ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲಿದ್ದೀರಿ. ಆಸ್ತಿ ವಿಚಾರವಾಗಿ ಗೊಂದಲ ಉಂಟಾಗಲಿದೆ. ಎಚ್ಚರಿಕೆ ಇರಲಿ.

ಸಿಂಹ: ಸ್ವಾರ್ಥಿಗಳ ಸ್ವಾರ್ಥ ಸಾಧನೆಗೆ ನೀವು ಬಳಕೆಯಾಗುವ ಅವಕಾಶವಿದೆ. ಎಚ್ಚರಿಕೆಯಿಂದ ಇರಿ. ಮಾತಿಗಿಂತ ಮೌನ ಲೇಸು.

ಕನ್ಯಾ: ಎಲ್ಲವೂ ನನ್ನಿಂದಲೇ ಎನ್ನುವ ಅಹಂ ಬೇಡ. ನಿಮ್ಮ ಹಿತ ಬಯಸುವ ವ್ಯಕ್ತಿಗಳ ಮಾತಿಗೆ ಬೆಲೆ ನೀಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ರಾಜಕೀಯ ಪ್ರಗತಿಗೆ ಪೂರಕವಾಗಿ ಇಂದು ಕೆಲವು ಅವಕಾಶಗಳು ನಿಮ್ಮ ಮನೆ ಬಾಗಿಲಿಗೆ ತುಲಾ ಬರಲಿವೆ. ಮನೆಯಲ್ಲಿ ಸಂತಸ ಹೆಚ್ಚಲಿದೆ.

ವೃಶ್ಚಿಕ: ಕಣ್ಣಿಗೆ ಕಾಣುವುದೆಲ್ಲವೂ ಸತ್ಯವಲ್ಲ. ಸರಿಯಾಗಿ ವಿವೇಚನೆ ಮಾಡಿ ನಿರ್ಧಾರ ಕೈಗೊಳ್ಳಿ. ನಿಮ್ಮಿಂದ ಇತರರು ಖುಷಿಯಾಗಿರಲಿದ್ದಾರೆ.

ಧನುಸ್ಸು: ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ. ತಾಯಿಯ ಸಹಕಾರದಿಂದ ಕೆಲಸದಲ್ಲಿ ಪ್ರಗತಿ ಸಾಧ್ಯವಾಗಲಿದೆ.

ಮಕರ: ಬೆಳಗ್ಗೆಯಿಂದಲೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೆಚ್ಚು ಪರಿಗಣಿಸದಿರಿ 

ಕುಂಭ: ಸಂಬಂಧಗಳಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಹಾಕದಿರಿ. ದಿನ ಪೂರ್ತಿ ಕಾರ್ಯ ಮಗ್ನರಾಗಲಿದ್ದೀರಿ. ಅತಿಯಾದ ಕೋಪ ಬೇಡ.

ಮೀನ: ಮತ್ತೊಬ್ಬರ ಮನಸ್ಸಿಗೆ ನೋವಾಗುತ್ತದೆ ಎನ್ನುವ ಕಾರಣಕ್ಕೆ ಸುಳ್ಳು ಹೇಳುವುದು ಬೇಡ. ನೇರ, ನಿಷ್ಠೂರವಾಗಿ ನಡೆದುಕೊಳ್ಳಿ

click me!