
ಇದರ ನಡುವೆಯೇ ಮಹಿಳಾ ಮೀಸಲಾತಿಯನ್ನು ಜಾರಿ ಮಾಡಲು ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ತುಮಕೂರಿನ ಕೆಂಕೆರೆ ಚೆನ್ನಬಸವೇಶ್ವರ ಸ್ವಾಮಿ ರಥೋತ್ಸವ ನಡೆಯಿತು. ಈ ರಥೋತ್ಸವದಲ್ಲಿ ಜನರು ಬಾಳೆಹಣ್ಣಿನ ಮೇಲೆ ತಮ್ಮ ಇಷ್ಟಾರ್ಥಗಳನ್ನು ಬರೆದು ಅದನ್ನು ರಥಕ್ಕೆ ಎಸೆಯುತ್ತಾರೆ. ಹೀಗೆ ಮಾಡಿದರೆ ತಮ್ಮ ಕೋರಿಕೆ ಈಡೇರುತ್ತದೆ ಎನ್ನುವುದು ಭಕ್ತರ ನಂಬಿಕೆ. ಇಂಥ ರಥೋತ್ಸವ ಹಾಗೂ ಸಂಪ್ರದಾಯ ಕರ್ನಾಟಕದಲ್ಲಿ ಹಲವು ಊರುಗಳಲ್ಲಿ ಇದೆ.
ಪ್ರತಿಬಾರಿಯೂ ಬಾಳೆಹಣ್ಣಿನ ಮೇಲೆ ಚಿತ್ರ ವಿಚಿತ್ರ ಕೋರಿಕೆ ಕೇಳುವ ಫೋಟೋ, ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ವೈರಲ್ ಆಗಿರುವ ಬಾಳೆಹಣ್ಣಿನ ಮೇಲೆ ಕಾಂಗ್ರೆಸ್ ವಿರುದ್ಧ ಬರೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ಗೆ ತಕ್ಕಪಾಠ ಕಲಿಸುತ್ತೇವೆ ಎಂದು ಬಾಳೆಹಣ್ಣಿನ ಮೇಲೆ ಬರೆದು ಅದನ್ನು ರಥಕ್ಕೆ ಎಸೆಯಲಾಗಿದೆ.
ಇದರ ಫೋಟೋ ಮತ್ತು ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಟ್ಟಿನಲ್ಲಿ ದೇವರ ರಥೋತ್ಸವದಲ್ಲಿಯೂ ರಾಜಕೀಯ ಪ್ರವೇಶ ಮಾಡುತ್ತಿರುವುದಕ್ಕೆ ಹಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.