ವಾಹನ ಸವಾರರಿಗೆ ಸಿಹಿ ಸುದ್ದಿ- ತೆರಿಗೆ ಇಳಿಸಿದ ರಾಜ್ಯ ಸರ್ಕಾರ!

Published : Sep 29, 2020, 07:39 PM IST
ವಾಹನ ಸವಾರರಿಗೆ ಸಿಹಿ ಸುದ್ದಿ- ತೆರಿಗೆ ಇಳಿಸಿದ ರಾಜ್ಯ ಸರ್ಕಾರ!

ಸಾರಾಂಶ

ಕರ್ನಾಟಕ ಸರ್ಕಾರ ವಾಹನ ಸವಾರರಿಗೆ ಬಂಪರ್ ಕೂಡುಗೆ ನೀಡಿದೆ. ಮೋಟಾರು ವಾಹನ ತೆರಿಗೆ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಇದರ ಪರಿಣಾಮವಾಗಿ ತೆರಿಗೆ ದರ ಇಳಿಸಲಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು(ಸೆ.29):  ಕರ್ನಾಟಕ ರಾಜ್ಯ ಸರ್ಕಾರ ವಾಹನ ಸವಾರರ ಮೇಲಿನ ಹೊರೆ ಕಡಿಮೆ ಮಾಡಿದೆ. 900 ರೂಪಾಯಿ ಇದ್ದ ಮೋಟಾರು ವಾಹನ ತೆರಿಗೆಯನ್ನು ಇದೀಗ 700 ರೂಪಾಯಿಗೆ ಇಳಿಸಲಾಗಿದೆ. ಈ ಕುರಿತು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಕಣೆ ಹೊರಡಿಸಿದ್ದಾರೆ.

ಲೈಸೆನ್ಸ್, ವಿಮೆ ಸೇರಿದಂತೆ ವಾಹನ ದಾಖಲೆ ಪತ್ರಗಳಿಗೆ ಹೊಸ ನಿಯಮ; ಅ.1 ರಿಂದ ಜಾರಿ!.

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ ರೂ. 900/- ಗಳ ಮೋಟಾರು ವಾಹನ ತೆರಿಗೆಯನ್ನು ರೂ. 700/- ಗಳಿಗೆ ಇಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶ್ರೀ ಸವದಿ ಅವರು ತಿಳಿಸಿದ್ದಾರೆ.

PREV
click me!

Recommended Stories

ಏಪ್ರಿಲ್ ತಿಂಗಳ ಡಿಸ್ಕೌಂಟ್ ಆಫರ್, ವೆನ್ಯೂ, ಕ್ರೆಟಾ ಸೇರಿ ಹ್ಯುಂಡೈ ಕಾರುಗಳಿಗೆ ಭಾರಿ ರಿಯಾಯಿತಿ
ಕರ್ನಾಟಕದ ಎಮೊಬಿ ಎಲೆಕ್ಟ್ರಿಕ್ ಸ್ಕೂಟರ್ ಅತೀ ಕಡಿಮೆ ಬೆಲೆಯಲ್ಲಿ ಬಿಡುಗಡೆ