ಅಪಘಾತಕ್ಕೀಡಾದವರ ಉಚಿತ ಚಿಕಿತ್ಸೆಗಾಗಿ ಟೋಲ್ ಬೆಲೆ ಹೆಚ್ಚಳಕ್ಕೆ ಕೇಂದ್ರ ನಿರ್ಧಾರ!

Published : Aug 23, 2020, 09:27 PM ISTUpdated : Aug 23, 2020, 09:54 PM IST
ಅಪಘಾತಕ್ಕೀಡಾದವರ ಉಚಿತ ಚಿಕಿತ್ಸೆಗಾಗಿ ಟೋಲ್ ಬೆಲೆ ಹೆಚ್ಚಳಕ್ಕೆ ಕೇಂದ್ರ ನಿರ್ಧಾರ!

ಸಾರಾಂಶ

ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮಹತ್ವದ ಪ್ರಸ್ತಾವನೆಯೊಂದನ್ನು ಮುಂದಿಟ್ಟಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ. ಹೆಚ್ಚಳ ಮಾಡಿದ ಹಣವನ್ನು ರಸ್ತೆ ಅಪಘಾತಕ್ಕೊಳಗಾದವರಿಗೆ ಉಚಿತ ಚಿಕಿತ್ಸೆ ನೀಡಲು ಬಳಸಲು ನಿರ್ಧರಿಸಲಾಗಿದೆ.

ನವದೆಹಲಿ(ಆ.23):  ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ಮತ್ತೊಂದು ಮಹತ್ವದ ಪ್ರಸ್ತಾವನೆಯನ್ನು ಮಂದಿಟ್ಟಿದೆ. ದೇಶದ ರಾಷ್ಟ್ರೀಯ ಹೆದ್ದಾರಿಯ ಟೋಲ್ ಬೆಲೆಯನ್ನು ಹೆಚ್ಚಿಸಲು ಮುಂದಾಗಿದೆ. ಈ ಮೂಲಕ ಸಂಗ್ರಹವಾದ ಹಣವನ್ನು ರಸ್ತೆ ಅಪಘಾತಕ್ಕೊಳಗಾದವರಿಗೆ ಉಚಿತ ಚಿಕಿತ್ಸೆ ನೀಡಲು ಕೇಂದ್ರ ಮುಂದಾಗಿದೆ. ಈ ಕುರಿತು ಶೀಘ್ರದಲ್ಲೇ ಪ್ರಕರಣೆ ಹೊರಬೀಳುವ ಸಾಧ್ಯತೆ ಇದೆ.

ಹೆಲ್ಮೆಟ್ ಹಾಕದೇ ಬೈಕ್, ಸ್ಕೂಟರ್ ಸ್ಟಾರ್ಟ್ ಮಾಡಬೇಡಿ-ಯಾಕೆ?.

ವಿಮೆ ಇಲ್ಲದ ವಾಹನಗಳು, ವಿಮೆ ಇಲ್ಲದ ವ್ಯಕ್ತಿಗಳು ಹಾಗೂ ಹಿಟ್ ಅಂಡ್ ರನ್ ಕೇಸ್‌ಗಳಲ್ಲಿ ಅಪಘಾತಕ್ಕೀಡಾದವರಿಗೆ ಉಚಿತ ಚಿಕಿತ್ಸೆ ನೀಡಲು ಕೇಂದ್ರ ಮುಂದಾಗಿದೆ. ಪ್ರತಿ ವರ್ಷ ಈ ರೀತಿ ಪ್ರಕರಣಗಳು ದಾಖಲಾಗುತ್ತಿದೆ. ಈ ವೇಳೆ ಹಣವಿಲ್ಲದೆ ಸೂಕ್ತ ಚಿಕಿತ್ಸೆ ಸಿಗದೆ ಅಪಘಾತಕ್ಕೀಡಾದ ವ್ಯಕ್ತಿಗಳು ಅಪಾಯಕ್ಕೆ ಸಿಲುಕಿದ ಹಲವು ಊದಾಹರಣೆಗಳಿವೆ. ಇದಕ್ಕಾಗಿ ಇಂತವರಿಗೆ ಉಚಿತ ಚಿಕಿತ್ಸೆ ನೀಡಲು ಟೋಲ್ ಬೆಲೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ನಂಬರ್ ಪ್ಲೇಟ್ ರಿಜಿಸ್ಟ್ರೇಶನ್‌ನಲ್ಲಿ ಬದಲಾವಣೆ; ಹೊಸ ನಿಯಮ ಪ್ರಕಟಿಸಿದ MoRTH

ಹಿಟ್ ಅಂಡ್ ರನ್ ಹಾಗೂ ವಿಮೆ ಇಲ್ಲದ  ಅಪಘಾತಕ್ಕೀಡಾದ ವ್ಯಕ್ತಿಗಳ ಚಿಕಿತ್ಸೆಗಾಗಿ ಪ್ರತಿ ವರ್ಷ 2,000 ರೂಪಾಯಿ ಕೋಟಿ ಅವಶ್ಯಕತೆ ಇದೆ. ಇತ್ತೀಚಿನ ಕೆಲ ವರ್ಷಗಳಲ್ಲಿನ ಸರಾಸರಿ ಚಿಕಿತ್ಸೆ ವೆಚ್ಚವಾಗಿದೆ. ಈ ರೀತಿ ಅಫಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳಿಗೆ ಪರಿಹಾರ, ಗಾಯಗೊಂಡವರಿಗೆ ಪರಿಹಾರ ನೀಡಲು ಹಣವದ ಅವಶ್ಯಕತೆ ಇದೆ. ಇದಕ್ಕಾಗಿ ಟೋಲ್ ಬೆಲೆಯಲ್ಲಿ ಹಣ ಸಂಗ್ರಹಿಸಲು ಕೇಂದ್ರ ಮುಂದಾಗಿದೆ.

ಸದ್ಯ ಟೋಲ್ ಹಣವನ್ನು ಫಾಸ್ಟಾಗ್ ಮೂಲಕವೇ ಹೆಚ್ಚಾಗಿ ಸಂಗ್ರಹಿಸಲಾಗುತ್ತಿದೆ. 5 ರೂಪಾಯಿ ಬೆಲೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಅನ್ನೋ ಮಾತುಗಳು ಕೇಳಿ ಬಂದಿದೆ. ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷ ಮಂದಿ ರಸ್ತೆ ಅಪಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಸುಮಾರು 5 ಲಕ್ಷ ಮಂದಿ ಅಪಘಾತದಿಂದ ಗಾಯಕ್ಕೆ ತುತ್ತಾಗುತ್ತಿದ್ದಾರೆ. ಅಪಘಾತದ ವೇಳೆ ತಕ್ಷಣ ಸೂಕ್ತ ಚಿಕಿತ್ಸೆ ಲಭ್ಯವಾದರೆ ಹಲವು ಜೀವಗಳು ಉಳಿಸಬಹುದು ಅನ್ನೋದು ಆರೋಗ್ಯ ಇಲಾಖೆ ವರದಿಯಾಗಿದೆ.

PREV
click me!

Recommended Stories

ಕಾಂತಾರ ನಟನಿಗೆ ದೈವದ ಅಭಯ, 1.5 ಕೋಟಿ ರೂ ವೆಲ್‌ಫೈರ್ ಕಾರಿನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ
ನಿಯಮಗಳ ಪಾಲಿಸದ ಸ್ಲೀಪರ್ ಬಸ್‌ ಸ್ಥಗಿತ: ಎನ್‌ಎಚ್‌ಆರ್‌ಸಿ