ಮಹಿಳೆಯರ ಸಂಭಾಷಣೆಯಲ್ಲಿ ಕೇಳಿಬಂದ ಆರೋಪ: ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ

By Sharath Sharma KalagaruFirst Published Sep 5, 2022, 11:23 AM IST
Highlights

Basavasiddhalinga Swamy Suicide: ಬೆಳಗಾವಿಯ ಗುರು ಮಡಿವಾಳೇಶ್ವರ ಮಠದ ಶ್ರೀ ಬಸವಸಿದ್ಧಲಿಂಗ ಸ್ವಾಮಿ ನೇಣಿಗೆ ಶರಣಾಗಿದ್ದಾರೆ. ಇತ್ತೀಚೆಗೆ ಇಬ್ಬರ ಮಹಿಳೆಯರ ನಡುವಿನ ಸಂಭಾಷಣೆ ವೈರಲ್‌ ಆಗಿತ್ತು. ಹಲವು ಮಠದ ಶ್ರೀಗಳ ವಿರುದ್ಧ ಮಹಿಳೆಯರು ಮಾತನಾಡಿದ್ದರು. ಅದರಲ್ಲಿ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರೂ ಕೇಳಿ ಬಂದಿತ್ತು. 

ಬೆಳಗಾವಿ: ಜಿಲ್ಲೆಯ ನೇಗಿನಹಾಳ ಗ್ರಾಮದ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರ ನಡುವಿನ ಟೆಲಿಫೋನ್‌ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮುರುಘಾ ಮಠದ ಶಿವಾಚಾರ್ಯ ಅವರ ಮೇಲಿನ ಅತ್ಯಾಚಾರ ಆರೋಪದ ಕುರಿತು ಇಬ್ಬರು ಮಹಿಳೆಯರು ಮಾತನಾಡುತ್ತಿದ್ದರು. ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಒಂದು ಮಹಿಳೆ ಸಂಭಾಷಣೆಯಲ್ಲಿ ಆರೋಪಿಸುತ್ತಾರೆ. ಆ ಸಂಭಾಷಣೆಯ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಯಾವ ಕಾರಣ ನೀಡಿದ್ದಾರೆ ಎಂಬುದನ್ನು ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ. 

ಮಹಿಳೆಯರ ಸಂಭಾಷಣೆಯಲ್ಲಿ ಏನಿದೆ?:

ಮಠದ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮೇಲೆ ಚಿತ್ರದುರ್ಗ ಮುರುಘಾ ಶರಣರ ಬಂಧನವಾಗಿರುವ ಸಂದರ್ಭದಲ್ಲಿ ಇಬ್ಬರು ಮಹಿಳೆಯರ ನಡುವಿನ ಸಂಭಾಷಣೆ ವೈರಲ್‌ ಆಗಿದೆ. ಈ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾವಿಧಾರಿಗಳ ಬಗ್ಗೆ ನಾನಾ ನೆಗೆಟಿವ್ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದರ ಮಧ್ಯೆ ಕರ್ನಾಟಕದ ಹಲವು ಮಠದ ಸ್ವಾಮೀಜಿಗಳು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸುವ ಆಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಕರ್ನಾಟಕದ ಹಲವು ಮಠದ ಸ್ವಾಮೀಜಿಗಳ ಕಾಮ ಪುರಾಣ ಬಿಚ್ಚಿಟ್ಟ ಮಹಿಳೆ, ಆಡಿಯೋ ವೈರಲ್

ಇಬ್ಬರು ಹೆಂಗಸರು ಪರಸ್ಪರ ಮಾತನಾಡಿಕೊಂಡಿರುವ ಆಡಿಯೋ ಇದಾಗಿದ್ದು, ಕರ್ನಾಟಕದ ಹಲವು ಸ್ವಾಮೀಜಿಗಳ ಮೇಲೆ ಆರೋಪಿಸಿದ್ದಾರೆ. ರಾಜ್ಯದ ಹಲವು ಮಠಗಳ ಸ್ವಾಮೀಜಿಗಳು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಹೆಣ್ಣು ಮಕ್ಕಳನ್ನು ಹಾಳು ಮಾಡಿದ್ದಾರೆ. ಬಹಳಷ್ಟು ಜನ ಕೆಟ್ಟವರೇ ಎಂದು ಮಹಿಳೆಯರಿಬ್ಬರ ಮಾತನಾಡಿರುವ ಆಡಿಯೋದಲ್ಲಿದೆ.

ಬೆಳಗಾವಿಯ ಸತ್ಯಕ್ಕ ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು ಗಂಗಾವತಿಯ ಇನ್ನೊಬ್ಬ ಮಹಿಳೆ ಜೊತೆಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಹೆಣ್ಮಕ್ಳನ್ನ ಲೈಂಗಿಕ ಚಟುವಟಿಕೆಗೆ ಬಳಸಿಕೊಳ್ಳುವ ರಾಜ್ಯದ ಮಠಗಳು, ಶ್ರೀಗಳ ಹೆಸರುಗಳನ್ನು ಸಹ ಬಹಿರಂವಾಗಿ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Murugha Seer Police Custody ಮುರುಘಾ ಶ್ರೀ ರಕ್ಷಿಸುವ ಪ್ಲಾನ್ ಉಲ್ಟಾ, ಚಿತ್ರದುರ್ಗ ಕೋರ್ಟ್‌ನಲ್ಲಿ ನಡೆದಿದ್ದೇನು?

ಮಹಿಳೆಯ ಆಡಿಯೋ ಹೀಗಿದೆ:
ತಮಿಳುನಾಡು ಸತ್ಯಕ್ಕ ಅಂದ್ರೆ ಕೆಲವು ಸ್ವಾಮೀಜಿಗಳು ಮಾತಾಡುವುದಿಲ್ಲ. ನಾನು 10 ವರ್ಷ ತಮಿಳುನಾಡಿನಲ್ಲಿ ಇದ್ದು, ಬಸವ ಸೇವಾ ಸಮತಿಯನ್ನು ಕಟ್ಟಿ ಬಿಟ್ಟು ಬಂದಿದ್ದೇನೆ. ಈಗ ಈ ಸ್ವಾಮೀಜಿಯ ಘಟನೆ ಸುಳ್ಳು ಅಂತ ಕೆಲವರು ಮಾತನಾಡುತ್ತಿದ್ದಾರೆ. ಆದ್ರೆ, ಅವರ ಬಳಿ ಇದ್ದ ಹೆಣ್ಣು ಮಕ್ಕಳಿಗೇ ಗೊತ್ತು ಅವರು ಎಂಥವರು ಎಂದು ಮಹಿಳೆ ಹೇಳಿದ್ದಾಳೆ.

ಇನ್ನು ಆ ಮಹಿಳೆ ಮಾತು ಮುಂದುರಿಸಿದ್ದು, ಮದುರೈನಲ್ಲಿರುವ ಮಠದ ಹೆಸರಿನಲ್ಲಿ ಐದು ಎಕರೆ ಜಮೀನಿದೆ. ನನ್ನೊಂದಿಗೆ ಚೆನ್ನಾಗಿರು. ಎಲ್ಲಾ ವ್ಯವಸ್ಥೆ ಮಾಡುತ್ತೇನೆ ಎಂದು ಒಬ್ಬ ಸ್ವಾಮೀಜಿ ನನಗೆ ಆಫರ್ ಕೊಟ್ಟಿದ್ರು. ಎಲ್ಲ ಹೊರಗೆ ಹಾಕಬಹುದು. ಆದ್ರೆ, ರಕ್ಷಣೆ ಇಲ್ಲ ಎಂದು ಮಹಿಳೆ ಮಾತನಾಡಿದ್ದಾಳೆ.

ಇದನ್ನೂ ಓದಿ: Murugha Sri case: ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ, ವರದಿಯಲ್ಲಿ ಗಂಡಸ್ತನ ಸಾಬೀತು

ಸ್ವಾಮೀಜಿಯೊಬ್ಬರು ಶಿರಸಿಯ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಬಳಿಕ ಆಕೆ ಪ್ರಗ್ನೆಂಟ್ ಆಗಿದ್ದಳು. ಸ್ವಾಮೀಜಿಗಳು ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗಿ ಬರುವುದರೊಳಗೆ ಪೋಷಕರು ಆ ಯುವತಿಗೆ ಲೆಕ್ಚರರ್ ಒಬ್ಬರ ಜೊತೆ ಮದುವೆ ಮಾಡಿಕೊಟ್ಟರು. ಮಠದ ಸ್ವಾಮಿಗಳೇ ಮದ್ವೆ ಮಾಡಿಕೊಟ್ರು. 40 ಲಕ್ಷ ಮೌಲ್ಯದ ಮನೆ, ಕಾರು ಕೊಟ್ಟರು. ಅವಳಿಗೆ ತಿಂಗಳು-ತಿಂಗಳು ಇಂತಿಷ್ಟು ಅಂತ ಹಣ ನೀಡುತ್ತಿದ್ದರು. ಹೀಗೆ ಕರ್ನಾಟಕದ ಹಲವು ಸಮುದಾಯದ ಸ್ವಾಮೀಜಿಗಳ ಹೆಸರಿಸಿದ್ದಾರೆ.

ಆದ್ರೆ, ಮಹಿಳೆಯರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಅವರಿಬ್ಬರು ಯಾರು? ಏನು? ಎನ್ನುವ ಖಚಿತ ಮಾಹಿತಿ ಇಲ್ಲ. ಆದರೆ, ಆಡಿಯೋ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಇದು ಕೇವಲ ಆರೋಪವಾಗಿದ್ದು ಇದರ ಬಗ್ಗೆ ಯಾವುದೇ ಪುರಾವೆ ನೀಡಿಲ್ಲ. 

ಆಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

click me!