ಹಸುಗಳಿಂದ ಬೆಂಗಳೂರಲ್ಲಿ ಭಾರೀ ಟ್ರಾಫಿಕ್ ಜಾಮ್ ಆರೋಪ - ಗೋವುಗಳ ಮಾಲೀನ ವಿರುದ್ಧ ಎಫ್‌ಐಆರ್..!

Published : Aug 11, 2026, 05:14 PM IST
bengaluru cow fir

ಸಾರಾಂಶ

ಬೆಂಗಳೂರಲ್ಲಿ ಒಂದು ಅಪರೂಪದ ಪ್ರಕರಣ ದಾಖಲಾಗಿದೆ. ಟ್ರಾಫಿಕ್ ಜಾಮ್ ಮಾಡಿದ ಹಸುಗಳ ಮಾಲೀಕನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ..

ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಹಸುಗಳನ್ನು ಅಡ್ಡಾದಿಡ್ಡಿಯಾಗಿ ಬಿಟ್ಟು ಸಂಚಾರಕ್ಕೆ ಅಡಚಣೆ ಉಂಟುಮಾಡುವ ಮಾಲೀಕರ ವಿರುದ್ಧ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಮಾರತಹಳ್ಳಿಯ ಕಳಾಮಂದಿರ ರಸ್ತೆಯಲ್ಲಿ ಹಸುಗಳಿಂದಾಗಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾದ ಹಿನ್ನೆಲೆಯಲ್ಲಿ, ಹಸುಗಳ ಮಾಲೀಕನ ವಿರುದ್ಧ ಏರ್ ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಘಟನೆಯ ವಿವರ

ಆಗಸ್ಟ್ 10 ರಂದು ಬೆಳಗ್ಗೆ 10:00 ರಿಂದ 12:00 ಗಂಟೆಯ ಸುಮಾರಿಗೆ ಮಾರತಹಳ್ಳಿಯ ಕಳಾಮಂದಿರ ಸಮೀಪದ ಹೊರವರ್ತುಲ ರಸ್ತೆಯಲ್ಲಿ (ORR) ಸುಮಾರು 9 ರಿಂದ 10 ಹಸುಗಳು ರಸ್ತೆಯ ಮಧ್ಯೆ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದವು. ಈ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಭಾರೀ ಅಡಚಣೆಯುಂಟಾಗಿತ್ತು. ಕರ್ತವ್ಯದಲ್ಲಿದ್ದ ಹೆಚ್.ಎ.ಎಲ್ ಏರ್ ಪೋರ್ಟ್ ಸಂಚಾರ ಠಾಣೆಯ ಪೊಲೀಸ್ ಅಧಿಕಾರಿ ನಾಗೇಂದ್ರ ಎನ್. ಅವರು ಇದನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ.

ರಸ್ತೆಯಲ್ಲಿ ಹಸುಗಳನ್ನು ಬಿಟ್ಟು ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಹಸುಗಳ ಮಾಲೀಕ ಸಂತೋಷ್ ಇ. (ಬಿನ್ ಈರಪ್ಪ) ಎಂಬುವವರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಸಂತೋಷ್ ಅವರು ಅಶ್ವತ್ಥನಗರದ ನಿವಾಸಿಯಾಗಿದ್ದು, ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 285 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

  • ಅಪರಾಧ ಸಂಖ್ಯೆ: 126/2026
  • ಸ್ಥಳ: ಕಳಾಮಂದಿರ ಸಮೀಪ, ಹೊರವರ್ತುಲ ರಸ್ತೆ, ಮಾರತಹಳ್ಳಿ.
  • ಆರೋಪಿ: ಸಂತೋಷ್ ಇ (40 ವರ್ಷ).
  • ದೂರುದಾರರು: ನಾಗೇಂದ್ರ ಎನ್ (ಪೊಲೀಸ್ ಅಧಿಕಾರಿ).
  • ಕಾಯ್ದೆ: ಬಿಎನ್ಎಸ್ (BNS) ಸೆಕ್ಷನ್ 285 (ಸಾರ್ವಜನಿಕ ರಸ್ತೆಯಲ್ಲಿ ಅಪಾಯ ಅಥವಾ ಅಡಚಣೆ ಉಂಟುಮಾಡುವುದು).

ನಿರ್ಲಕ್ಷ್ಯತನದಿಂದ ಹಸುಗಳನ್ನು ರಸ್ತೆಗೆ ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಜಾನುವಾರುಗಳ ಹಾವಳಿ ಹೆಚ್ಚಾಗುತ್ತಿದ್ದು, ಈ ಎಫ್‌ಐಆರ್ ಇತರ ಮಾಲೀಕರಿಗೆ ಎಚ್ಚರಿಕೆಯ ಸಂದೇಶ ನೀಡಿದಂತಿದೆ.

PREV
Read more Articles on
click me!

Recommended Stories

ರೇಣುಕಾಸ್ವಾಮಿ ಕೇಸ್: ಸಾಕ್ಷಿಗೆ ಬೆದರಿಕೆ ಪ್ರಕರಣದಲ್ಲಿ FSLನಿಂದ ಸ್ಫೋಟಕ ಸತ್ಯ, ಪ್ರಭಾವಿ ಮಹಿಳೆಯ ಹೆಸರು ಬೆಳಕಿಗೆ!
ಬೆಂಗಳೂರು ಕಂಠೀರವ ಸ್ಟುಡಿಯೋ ಬಳಿ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು!