ಆಗಸ್ಟ್ 13 ರಂದು ಕರ್ನಾಟಕ ಬಂದ್ ಫಿಕ್ಸ್.. ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ಬಂದ್!

Published : Aug 09, 2026, 02:07 PM IST
Vatal Nagaraj

ಸಾರಾಂಶ

ಆಗಸ್ಟ್ 13 ರಂದು ಕರ್ನಾಟಕ ಬಂದ್ ಆಗೋದು ಪಕ್ಕಾ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸ್ಪಷ್ಟಪಡಿಸಿದ್ದಾರೆ. ಇವತ್ತು ನಡೆದ ಜಾಗಟೆ ಪ್ರತಿಭಟನೆ ವೇಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಆಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಹಾಗೂ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಆಗಸ್ಟ್ 13ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿವೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾತನಾಡಿದ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬಂದ್ ನಡೆಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 13ರ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ನಡೆಯಲಿದೆ. ಬಂದ್‌ ಯಶಸ್ವಿಗೊಳಿಸಲು ನಾಳೆಯಿಂದಲೇ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ. ಆಗಸ್ಟ್ 11 ರಂದರು ಹುಬ್ಬಳ್ಳಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡಲಾಗುವುದು, ನಾಳೆ ಬೆಳಗ್ಗೆ ಅತ್ತಿಬೆಲೆಯಲ್ಲಿ ಪ್ರತಿಭಟನೆ ಮಾಡ್ತೀವಿ. ಬೆಳಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಕರ್ನಾಟಕ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 13ರಂದು ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆಯಲಿದೆ. ರಾಜ್ಯ ಸರ್ಕಾರ ನೀರು ಬಂದಿದೆ ಅಂತಾ ಹೇಳಬಹುದು. ನೀರು ಹೋಗಿದೆ ಅಂದ್ರೂ ಹೋರಾಟ ನಿಲ್ಲಲ್ಲ. ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಮಾಡ್ತಿದೆ. ಈ ವಿಚಾರಕ್ಕೆ ನಮ್ಮ ಹೋರಾಟ ನಡೆಯಲಿದೆ.

ಮೇಕೆದಾಟು ಯೋಜನೆ ಆಗಬೇಕು, ಆಗ ನೀರು‌ ವ್ಯರ್ಥ ಆಗೋದಿಲ್ಲ. ಹೀಗಾಗಿ ನಾಳೆ ಅತ್ತಿಬೆಲೆ ಟೋಲ್ ಗೇಟ್ ಬಂದ್ ಆಗುತ್ತೆ. ಆಗಸ್ಟ್ 11 ರಂದು ಹುಬ್ಬಳ್ಳಿಯಲ್ಲಿ ಚಳವಳಿ ಮಾಡ್ತೇವೆ. ಆಗಸ್ಟ್ 13 ರಂದು ಕರ್ನಾಟಕ ಸಂಪೂರ್ಣ ಬಂದ್ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಬೇಡಿಕೆಗಳೇನು?

ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಗೆ ಕೂಡಲೇ ಚಾಲನೆ ನೀಡಬೇಕು. ಉತ್ತರ ಕರ್ನಾಟಕದ ಜನರ ಆಶೋತ್ತರವಾದ ಈ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕರ್ನಾಟಕದ ಜನತೆ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಬೇಕು. ಇದು ನಮ್ಮ ನೀರು, ನಮ್ಮ ಹಕ್ಕು ಮತ್ತು ನಮ್ಮ ನಾಡಿನ ಉಳಿವಿಗಾಗಿ ನಡೆಯುತ್ತಿರುವ ಹೋರಾಟ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಆಗಸ್ಟ್ 13ರ ಬಂದ್‌ನಿಂದಾಗಿ ಸಾರಿಗೆ, ಶಾಲಾ-ಕಾಲೇಜು ಹಾಗೂ ವಾಣಿಜ್ಯ ಚಟುವಟಿಕೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

PREV
Read more Articles on
click me!

Recommended Stories

ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಹೊಸ ರೂಪ; ರೈಲು ಸಂಚಾರ ಇನ್ಮುಂದೆ ಮತ್ತಷ್ಟು ಸುಗಮ
Nagarbhavi schoking: ಬಿರಿಯಾನಿಗೆ ಚಟ್ನಿ ಕೊಡದಿದ್ದಕ್ಕೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು!