Bengaluru: ಆಟೋಗೆ ಡಿಕ್ಕಿಯಾಗಿ ಕಟ್ಟಡಕ್ಕೆ ಗುದ್ದಿ ನಿಂತ ಕಂಟೈನರ್ ಲಾರಿ; ಮೂವರ ಸಾವು

Published : Sep 13, 2025, 09:19 AM ISTUpdated : Sep 13, 2025, 09:24 AM IST
Bengaluru Lorry Auto Accident

ಸಾರಾಂಶ

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ  ಕಂಟೇನರ್ ಲಾರಿ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯ ಸ್ಟೇರಿಂಗ್ ಕಟ್ ಆಗಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ (Bengaluru Deadly Accident) ಸಂಭವಿಸಿದೆ. ಆಟೋಗೆ ಕಂಟೇನರ್ ಲಾರಿ ಡಿಕ್ಕಿ (Container Lorry Collided Auto)  ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಆಟೋದಲ್ಲಿ ಯೇಸು ಮತ್ತು ಜೆನಿಫರ್ ಹಾಗೂ ಚಾಲಕ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಆಟೋ ಚಾಲಕನ ಹೆಸರು ತಿಳಿದು ಬಂದಿಲ್ಲ . ಕಂಟೇನರ್ ಲಾರಿ ಮೊದಲು ಆಟೋಗೆ ಡಿಕ್ಕಿಯಾಗಿದೆ. ನಂತರ ಚಾಲಕನ ನಿಯಂತ್ರಣ ಕಳೆದುಕೊಂಡ ಕಂಟೇನರ್ ಲಾರಿ, ಆಟೋ ಸಮೇತ ನಿರ್ಮಾಣ ಹಂತದ ಕಟ್ಟಡಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಗಂಡ-ಹೆಂಡತಿ & ಬಾಯ್​​ಫ್ರೆಂಡ್​​: ಗಂಡನನ್ನ ಕೊಲ್ಲಲು ಹೆಂಡತಿ ಸ್ಕೆಚ್, ಕತ್ತು ಹಿಸುಕಲು ಬಂದ ಗೆಳೆಯ!​

ಭೀಕರ ಅಪಘಾತಕ್ಕೆ ಕಾರಣ ಏನು?

ಕಂಟೈನರ್ ಲಾರಿ ಸ್ಟೇರಿಂಗ್ ಕಟ್ ಆಗಿದ್ದರಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.  ಕಂಟೇನರ್ಲಾ ರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಂಟೈನರ್ ಲಾರಿ ಕಾಮಾಕ್ಷಿಪಾಳ್ಯ ಇಂಡಸ್ಟ್ರಿಯಲ್ ಏರಿಯಾ ಕಡೆಯಿಂದ ಬರುತ್ತಿತ್ತು. ಭೀಕರ ಅಪಘಾತದಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿದೆ. 

ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳನ್ನು  ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ವಾಹನಗಳನ್ನು ತೆರವುಗೊಳಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. 

ಇದನ್ನೂ ಓದಿ: ಮಗಳ ಬಾಯ್‌ಫ್ರೆಂಡ್‌ ಜೊತೆ ತಾಯಿಯ ಲವ್ವಿಡವ್ವಿ, ಕಳ್ಳತನದ ನಂತರ ಗೊತ್ತಾಯ್ತು ಅಸಲಿ ವಿಷಯ!

PREV
Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!