ಸಾಲು ಮರದ ತಿಮ್ಮಕ್ಕ ನೆಟ್ಟಿದ್ದ 200ಕ್ಕೂ ಅಧಿಕ ಮರಗಳಿಗೆ ಕೊಡಲಿ ಏಟು- ದೂರು ದಾಖಲು

Published : Aug 19, 2025, 04:06 PM IST
Saalumarada Thimmakka

ಸಾರಾಂಶ

ಸಾಲು ಮರದ ತಿಮ್ಮಕ್ಕ ಅವರು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕಡಿದ ಆರೋಪದ ಮೇಲೆ ಬೇಲೂರು ತಹಶೀಲ್ದಾರ್ ವಿರುದ್ಧ ದೂರು ದಾಖಲಾಗಿದೆ. .

ಬೆಂಗಳೂರು: ವನಮಾತೆ ಸಾಲು ಮರದ ತಿಮ್ಮಕ್ಕ (Saalumarada Thimmakka) ಅವರು ತಾನು ನೆಟ್ಟಿದ್ದ 200ಕ್ಕೂ ಅಧಿಕ ಮರಗಳನ್ನು ಕತ್ತರಿಸಲಾಗಿದೆ ಎಂದು ಆರೋಪಿಸಿ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ಮರಗಳ ಮಾರಣಹೋಮಕ್ಕೆ ಹಾಸನ ಜಿಲ್ಲೆಯ ಬೇಲೂರು (Belur, Hassan) ತಾಲೂಕಿನ ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಕಾರಣ ಎಂದು ಸಾಲು ಮರದ ತಿಮ್ಮಕ್ಕ ಆರೋಪಿಸಿದ್ದಾರೆ. ದೂರಿನಲ್ಲಿ ಬೇಲೂರು ತಹಶೀಲ್ದಾರ್ ಕಚೇರಿ ಹಿಂಭಾಗದಲ್ಲಿ ಮರಗಳನ್ನು ನೆಟ್ಟಿದ್ದರು. ಇದೀಗ ಈ ಮರಗಳನ್ನು ಕಡಿಯಲಾಗಿದೆ ಎಂದು ಸಾಲು ಮರದ ತಿಮ್ಮಕ್ಕ ಗಂಭೀರ ಆರೋಪ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ತಿಮ್ಮಕ್ಕ ಅವರು ಮರಗಳನ್ನು ನೆಡಲು ಆರಂಭಿಸುತ್ತಾರೆ. ರಾಜ್ಯ ಹೆದ್ದಾರಿ 99ರ ಕುದೂರಿನಿಂದ ಹುಲಿಕಲ್ ಮಾರ್ಗದ ನಡುವೆ ತಿಮ್ಮಕ್ಕ ಅವರು ನೆಟ್ಟಿರುವ ಮರಗಳನ್ನು ಕಾಣಬಹುದು. ಈ ಆಲದ ಮರಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಈ ಮರಗಳನ್ನೇ ತಿಮ್ಮಕ್ಕ ಅವರು ಮಕ್ಕಳಂತೆ ಕಾಣುತ್ತಿದ್ದರು.

2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯ ಗೌರವ

ತಿಮ್ಮಕ್ಕ ಅವರು ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅಂದಿನಿಂದ ಇವರನ್ನು ಸಾಲು ಮರದ ತಿಮ್ಮಕ್ಕ ಎಂದು ಗುರುತಿಸಲಾಗುತ್ತದೆ. ಸಾಲು ಮರದ ತಿಮ್ಮಕ್ಕ ಅವರನ್ನು ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಿಂದ ಗೌರವಿಸಲಾಗಿದೆ. ಭಾರತ ಸರ್ಕಾರ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಸಾಲು ಮರದ ತಿಮ್ಮಕ್ಕ ಅವರನ್ನು ಗೌರವಿಸಲಾಗಿದೆ. ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯವು 2020 ರಲ್ಲಿ ತಿಮ್ಮಕ್ಕ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಿಸಿದೆ.

PREV
Read more Articles on
click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ