Bihar Election Results: ಬಿಹಾರದಲ್ಲಿ ಪ್ರತಿಯೊಬ್ಬರಿಗೆ ₹10,000 ನೀಡಿ ಎನ್‌ಡಿಎ ಗೆಲುವು: ರಾಮಲಿಂಗಾರೆಡ್ಡಿ ಆರೋಪ

Kannadaprabha News, Ravi Janekal |   | Kannada Prabha
Published : Nov 17, 2025, 12:33 AM IST
Ramalingareddy

ಸಾರಾಂಶ

ಬಿಹಾರದಲ್ಲಿ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಚುನಾವಣೆ ನಡೆಸಿ ಅಧಿಕಾರ ಹಿಡಿದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಮತ ಖರೀದಿಸಿ, ಚುನಾವಣಾ ಅಕ್ರಮ ಎಸಗಲಾಗಿದೆ ಹಾಗೂ ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಮಧುಗಿರಿ(ತುಮಕೂರು): ಬಿಹಾರದಲ್ಲಿ ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು. 

ಬಿಹಾರದ ಎನ್‌ಡಿಎ ಚುನಾವಣಾ ಅಕ್ರಮ:

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ನಡೆದಿರುವುದು ಚುನಾವಣೆಯೇ ಅಲ್ಲ, ಅಲ್ಲಿ ಮತ ಖರೀದಿ ಮಾಡಲಾಗಿದೆ. ಚುನಾವಣೆಗೆ ಮುಂಚೆ ತಲಾ ₹10000 ನೀಡಿ ಓಟು ಪಡೆದಿದ್ದಾರೆ. ಅಕ್ರಮವಾಗಿದೆ ಎಂಬ ನೆಪ ಹೇಳಿ ಲಕ್ಷಾಂತರ ಮತಾದರರನ್ನು ಹೊರ ಹಾಕಲಾಯಿತು. ಕೊನೆಗೆ ಎಷ್ಟೋ ಲಕ್ಷ ಜನರನ್ನು ಸೇರಿಸಲಾಯಿತು. ಚುನಾವಣಾ ಆಯೋಗ ಯಾರ ಕೈಯಲ್ಲಿದೆ ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಸಿಬಿಐ, ಇ.ಡಿ., ಐ.ಟಿ. ಹೆಸರು ಹೇಳಿ ಹೆದರಿಸಲಾಗುತ್ತಿದೆ ಎಂದರು.

ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ:

ಚುನಾವಣೆ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಇವಿಎಂ ಹ್ಯಾಕ್ ಬಗ್ಗೆ ಸುರ್ಪೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಮಾತನಾಡಿದ ಅವರು, ಕೆಲವು ವಿಚಾರಗಳನ್ನು ನಾವು ಧೈರ್ಯವಾಗಿ ಹೇಳುವ ಹಾಗಿಲ್ಲ ಎಂದರು

PREV
Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!