ಹೊಸ ವರ್ಷ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ

Published : Dec 31, 2025, 09:18 PM IST
Bengaluru Rain

ಸಾರಾಂಶ

ಹೊಸ ವರ್ಷ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ, ಸಂಭ್ರಮಾಚರಣೆ ಮಾಡುತ್ತಿದ್ದವರು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ. ಕೆಲ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವರು ನಿರಾಸೆಗೊಂಡಿದ್ದಾರೆ. 

ಬೆಂಗಳೂರು (ಡಿ.31) ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮ ಮುಗಿಲು ಮುಟ್ಟಿದೆ. ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ. ಆದರೆ ಬೆಂಗಳೂರಿನ ಕೆಲ ಭಾಗದಲ್ಲಿ ಸಂಭ್ರಮಾಚರಣೆಯಲ್ಲಿದ್ದವರಿಗೆ ಮಳೆರಾಯ ಶಾಕ್ ಕೊಟ್ಟಿದ್ದಾನೆ. ಬೆಂಗಳೂರಿನ ಯಲಹಂಕ ಸುತ್ತ ಮುತ್ತ ಭಾರಿ ಮಳೆಯಾಗುತ್ತಿದೆ. ಕಳೆದ ಅರ್ಧಗಂಟೆಯಿಂದ ಯಲಂಕ ಹಾಗೂ ಸುತ್ತ ಮುತ್ತ ಭಾರಿ ಮಳೆಯಾಗುತ್ತಿದೆ. ಪರಿಣಾಮ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಸಜ್ಜಾಗಿದ್ದ ಹಲವರು ನಿರಾಸೆಗೊಂಡಿದ್ದಾರೆ.

ಭಾರಿ ಮಳೆಗೆ ಎಲ್ಲಾ ಕಾರ್ಯಕ್ರಮ ಸ್ಥಗಿತ

ಯಲಹಂಕಾ ಹಾಗೂ ಸುತ್ತ ಮತ್ತಲಿನ ಪ್ರದೇಶಗಳಲ್ಲಿ ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಹೊಸ ವರ್ಷದ ಪಾರ್ಟಿ, ಸಂಭ್ರಮಾಚರಣೆ ಕಾರ್ಯಕ್ರಮಗಳು ಸ್ಥಗಿತಗೊಂಡಿದೆ. ಹಲವೆಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಹಾಕಿದ್ದ ಪೆಂಡಾಲ್, ಶಾಮಿಯಾನಗಳು ನೀರಿನಿಂದ ತುಂಬಿಕೊಂಡಿದೆ. ಭಾರಿ ಮಳೆಯಿಂದ ಹೊಸ ವರ್ಷ ಸಂಭ್ರಮಾಚರಣೆಗೆ ಅಡ್ಡಿಯಾಗಿದೆ.

ಕೆಲ ದಿನಗಳಿಂದ ಮೂಡ ಕವಿದ ವಾತಾವರಣ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಚೆನ್ನೈ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಮೇಲೂ ಆಗಿದೆ. ಹೀಗಾಗಿ ಅತೀವ ಚಳಿಯಿಂದ ಕೂಡಿದ್ದ ವಾತಾವರಣ ತಗ್ಗಿ, ಮೋಡ ಕವಿದ ವಾತಾವರಣವಾಗಿ ಮಾರ್ಪಟ್ಟಿತ್ತು. ಹವಾಮಾನ ಇಲಾಖೆ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಕುರಿತು ಸೂಚನೆ ನೀಡಿತ್ತು. ಬೆಂಗಳೂರು ಸೇರಿದಂತೆ ಕೆಲೆವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿತ್ತು.

ಎಂಜಿ ರೋಡ್ ಸೇರಿ ಸುತ್ತಮುತ್ತ ಭರ್ಜರಿ ಸಂಭ್ರಮ

ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷದ ಸಂಭ್ರಮ ಜೋರಾಗಿದೆ. ಹೊಸ ವರ್ಷ ಬರಮಾಡಿಕೊಳ್ಳಲು ಹಲವರು ಸೇರಿದ್ದಾರೆ. ಪಾರ್ಟಿ, ಮ್ಯೂಸಿಕ್, ಸಂಭ್ರಮ ಮುಗಿಲು ಮುಟ್ಟಿದೆ. ಇತ್ತ ಬೆಂಗಳೂರು ಪೊಲೀಸರು ಭಾರಿ ಬಂದೋಬಸ್ತ್ ಮಾಡಿದ್ದಾರೆ. ಮಹಿಳಾ ಪೊಲೀಸ್ ಪಡೆ ಸೇರಿದಂತೆ ಹಲವು ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಸಿಸಿಟಿವಿ ಅಳವಡಿಸಲಾಗಿದೆ. ಬ್ಯಾರಿಕೇಡ್ ಹಾಕಿ ಜನ ದಟ್ಟಣೆ ನಿರ್ವಹಣೆ ಮಾಡಲಾಗಿದೆ.

 

PREV
Read more Articles on
click me!

Recommended Stories

ಹೊಸ ವರ್ಷದ ಕಿಕ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮಾಡಿದ್ರೆ ಅಷ್ಟೇ.. ಬೆಂಗಳೂರಿನ 50 ಫ್ಲೈ ಓವರ್‌ಗಳು ಬಂದ್; ರಸ್ತೆಗಿಳಿಯುವ ಮುನ್ನ ತಿಳಿಯಿರಿ
'ಬೆಂಗಳೂರು ಬಿಡ್ತಿರೋದು ಬೆಸ್ಟ್‌ ನಿರ್ಧಾರ..' ಹೈದ್ರಾಬಾದ್‌ ಯುವತಿಯ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗೆ ಸಿಡಿದೆದ್ದ ಕನ್ನಡಿಗರು