ನಾನ್ ವೆಜ್ ಬೇಕು ಅಣ್ಣ... ಅಗ್ರಹಾರದಲ್ಲಿ ಪ್ರತಿಭಟನೆಗಿಳಿದ ಕೈದಿಗಳು!

Published : Mar 29, 2019, 08:00 PM ISTUpdated : Mar 29, 2019, 08:04 PM IST
ನಾನ್ ವೆಜ್ ಬೇಕು ಅಣ್ಣ... ಅಗ್ರಹಾರದಲ್ಲಿ ಪ್ರತಿಭಟನೆಗಿಳಿದ ಕೈದಿಗಳು!

ಸಾರಾಂಶ

ಊಟಕ್ಕೆ ಪ್ರತಿಭಟನೆ ನಡೆಯುವ ಕಾಲ ದೂರವಿಲ್ಲ ಎಂಬ ಮಾತು ಹತ್ತಿರಕ್ಕೆ ಬಂದಿದೆ. ನಾನ್ ವೆಜ್ ನೀಡುತ್ತಿಲ್ಲ ಎಂಬ ಕಾರಣಕ್ಕೆ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ಆನೇಕಲ್ [ಮಾ. 29]  ಪರಪ್ಪನ ಅಗ್ರಹಾರದಲ್ಲಿ ಮೂರು ತಿಂಗಳಿಂದ ನಾನ್ ವೆಜ್ ಇಲ್ಲ ಎಂದು ಆರೋಪಿಸಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಮಧ್ಯಾಹ್ನದ ಊಟ ಬಿಟ್ಟು ಕೈದಿಗಳ ಪ್ರೊಟೆಸ್ಟ್ ಮಾಡಿದ್ದು ಮಾಂಸದ ಊಟ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಮಾಂಸ ನೀಡುವ ಟೆಂಡರ್ ಪಡೆದ ವ್ಯಕ್ತಿ ಗಾಂಜಾ ಸಾಗಣೆ ಕೇಸ್ ಅಲ್ಲಿ ಅರೆಸ್ಟ್ ಆಗಿದ್ದ ಕಾರಣ 3 ತಿಂಗಳಿಂದ್ ನಾನ್ ವೆಜ್ ನಿಷೇಧ ಮಾಡಲಾಗಿತ್ತು. ಹೊಸ ಟೆಂಡರ್ ಕರೆಯುವಲ್ಲಿ ಅಧಿಕಾರಿಗಳು ವಿಳಂಬ ಮಾಡಿದ್ದು ಪ್ರತಿಭಟನೆಗೆ ಕಾರಣವಾಗಿದೆ.

 ರೈಲಲ್ಲಿ ವೆಜ್-ನಾನ್’ವೆಜ್ ಪ್ರಯಾಣಿಕರಿಗೆ ಪ್ರತ್ಯೇಕ ಸೀಟು..!

ಪ್ರತಿ ಶುಕ್ರವಾರ ಕೈದಿಗಳಿಗೆ ನಾನ್ ವೆಜ್ ನೀಡಲಾಗುತ್ತಿತ್ತು. ಇಂದು ಶುಕ್ರವಾರ ಆದ್ದರಿಂದ ನೀಡ್ತಾರೆ ಎಂದು ಊಟಕ್ಕೆ ಕೈದಿಗಳು ಕಾದು ಕುಳಿತಿದ್ದರು.  ಪ್ರತಿಭಟನೆಯಲ್ಲಿ ತೊಡಗಿದ ಕೈದಿಗಳನ್ನು  ಮುಖ್ಯ ಅಧೀಕ್ಷಕ ಸೋಮಶೇಖರ್ ಸಮಾಧಾನಪಡಿಸಿದರು.

 

PREV
click me!

Recommended Stories

ಬೆಂಗಳೂರಿನಲ್ಲಿ ಎರಡು ದಿನ ಮದ್ಯ ನಿಷೇಧ! ಪಬ್, ರೆಸ್ಟೋರೆಂಟ್, ಬಾರ್ ಎಲ್ಲೂ ಸಿಗಲ್ಲ ಎಣ್ಣೆ!
ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಗೆ ಜಿಬಿಎ ಹೊಸ ರೂಲ್ಸ್; ನಿಮ್ಮ ಆಸ್ತಿಯನ್ನ ಉಳಿಸಿಕೊಳ್ಳಲು ಲಾಸ್ಟ್ ಚಾನ್ಸ್!