ಪೋಷಕರೆ ಗಮನಿಸಿ : ಖಾಸಗಿ ಶಾಲಾ ವಾಹನ ಸೇವೆ ಇರಲ್ಲ

Published : Oct 23, 2019, 07:44 AM IST
ಪೋಷಕರೆ ಗಮನಿಸಿ : ಖಾಸಗಿ ಶಾಲಾ ವಾಹನ ಸೇವೆ ಇರಲ್ಲ

ಸಾರಾಂಶ

ಪೋಷಕರೇ ಗಮನಿಸಿ. ಇಂದು ನಿಮ್ಮ ಮಕ್ಕಳ ಶಾಲಾ ವಾಹನ ಮನೆ ಬಾಗಿಲಿಗೆ ಬರುವುದಿಲ್ಲ. ಕಾರಣವೇನು ? 

ಬೆಂಗಳೂರು [ಅ.23]:  ರಾಜಧಾನಿಯಲ್ಲಿ ಬುಧವಾರ ಖಾಸಗಿ ಶಾಲೆಗಳ ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಖಾಸಗಿ ವಾಹನಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ವಾಹನ ಚಾಲಕರ ಸಂಘವು ಮಂಗಳವಾರ ಬೆಳಗ್ಗೆ 11ಕ್ಕೆ ಮಲ್ಲೇಶ್ವರಂನ ಶಿರೂರು ಪಾರ್ಕ್ನಲ್ಲಿ ಚಾಲಕರ ಸಮಾವೇಶ ಹಮ್ಮಿಕೊಂಡಿದೆ. 

ಈ ಸಮಾವೇಶದಲ್ಲಿ ಚಾಲಕರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಕರೆದೊಯ್ಯುವ ಖಾಸಗಿ ವಾಹನಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈಗಾಗಲೇ ಚಾಲಕರು ಮಕ್ಕಳ ಪೋಷಕರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಅವರು ಸಹ ಸಮಾವೇಶಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಸಂಘದ ಅಧ್ಯಕ್ಷ ಷಣ್ಮುಗಂ ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಮಾವೇಶ ಯಾರ ವಿರುದ್ಧದ ಪ್ರತಿಭಟನೆ ಅಥವಾ ಧರಣಿಯಲ್ಲ. ಚಾಲಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲಾಗುತ್ತದೆ. ಈ ಸಮಾವೇಶದಲ್ಲಿ ಚಾಲಕರು ಪಾಲ್ಗೊಳ್ಳಲೇ ಬೇಕಿರುವುದರಿಂದ ಸೇವೆಯಲ್ಲಿ ಕೊಂಚ ವ್ಯತ್ಯಯವಾಗಲಿದೆ. ಈ ಸಮಾವೇಶಕ್ಕೆ ಜೈ ಭುವನೇಶ್ವರಿ ಶಾಲಾ ವಾಹನ ಚಾಲಕರ ಸಂಘ ಸೇರಿದಂತೆ ಹಲವು ಚಾಲಕರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಹೇಳಿದರು.

PREV
click me!

Recommended Stories

ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ
ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್ ಹೇಳಿದ್ದೇನು?