ಭಾನುವಾರ ಹಳದಿ ಮೆಟ್ರೋ ಲೈನ್‌ ಉದ್ಘಾಟನೆ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ

Published : Aug 09, 2025, 10:02 AM ISTUpdated : Aug 10, 2025, 10:45 AM IST
Modi

ಸಾರಾಂಶ

ಭಾನುವಾರ ನಡೆಯಲಿರುವ ಮೆಟ್ರೋ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಪರ್ಯಾಯ ಮಾರ್ಗಗಳನ್ನು ಘೋಷಿಸಲಾಗಿದೆ. ಮಾರೇನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವೆಡೆ ವಾಹನ ಸಂಚಾರದಲ್ಲಿ ಬದಲಾವಣೆಗಳಿವೆ.

ಬೆಂಗಳೂರು (ಆ.9): ಭಾನುವಾರ ಹಳದಿ ಮೆಟ್ರೋ ಮಾರ್ಗ ಉದ್ಘಾಟನಾ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯ ವ್ಯಕ್ತಿಗಳು ಮತ್ತು ಸಾವಿರಾರು ಜನರು ಭಾಗವಹಿಸಲಿದ್ದಾರೆ. ಈ ಕಾರಣದಿಂದ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮತ್ತು ಪರ್ಯಾಯ ಮಾರ್ಗಗಳನ್ನು ಘೋಷಿಸಲಾಗಿದೆ.

ಸಂಚಾರ ನಿರ್ಬಂಧಗಳು

ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:00ರವರೆಗೆ: ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮಿ ಜಂಕ್ಷನ್‌ನಿಂದ 18ನೇ ಮುಖ್ಯ ರಸ್ತೆಯವರೆಗೆ ಹಾಗೂ ಮಾರೇನಹಳ್ಳಿ ಈಸ್ಟ್‌ ಎಂಡ್ ಮುಖ್ಯ ರಸ್ತೆ ಜಂಕ್ಷನ್‌ನಿಂದ ಅರವಿಂದ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಬೆಳಗ್ಗೆ 9:30 ರಿಂದ ಮಧ್ಯಾಹ್ನ 2:30ರವರೆಗೆ: ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಹೊಸೂರು ರಸ್ತೆಯ ಮೂಲಕ ಹೊಸೂರು ಕಡೆಗೆ ಹಾಗೂ ಹೊಸೂರು ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚಾರಕ್ಕೆ ನಿರ್ಬಂಧ ಇರಲಿದೆ. ಇದಲ್ಲದೆ, ಎಲೆಕ್ಟ್ರಾನಿಕ್ ಸಿಟಿ 1ನೇ ಹಂತದ ಇನ್‌ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆ ಮತ್ತು ಹೆಚ್‌.ಪಿ. ಅವೆನ್ಯೂ ರಸ್ತೆಗಳಲ್ಲಿ ಕೂಡ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು

ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮಿ ಜಂಕ್ಷನ್‌ನಿಂದ ಜಯದೇವ ಕಡೆಗೆ ಹೋಗುವ ವಾಹನ ಸವಾರರು ಬನಶಂಕರಿ ಬಸ್ ನಿಲ್ದಾಣದ ಮೂಲಕ ಸಾರಕ್ಕಿ ಮಾರ್ಕೆಟ್ ರಸ್ತೆ/9ನೇ ಕ್ರಾಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಐ.ಜಿ. ಸರ್ಕಲ್, ಆರ್.ವಿ. ಡೆಂಟಲ್ ಜಂಕ್ಷನ್ ಮಾರ್ಗವಾಗಿ ಜಯದೇವ ಕಡೆಗೆ ತಲುಪಬಹುದು.

ಹೊಸೂರು ರಸ್ತೆಯಿಂದ ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳು ಹೊಸೂರು ರಸ್ತೆ ಬೊಮ್ಮಸಂದ್ರ ಜಂಕ್ಷನ್‌ನಿಂದ ಜಿಗಣಿ ರಸ್ತೆಯ ಮೂಲಕ ಬನ್ನೇರುಘಟ್ಟ ರಸ್ತೆಯಲ್ಲಿ ನೈಸ್ ರಸ್ತೆಯನ್ನು ತಲುಪಬಹುದು.

ನೈಸ್ ರಸ್ತೆಯಿಂದ ಹೊಸೂರು ಕಡೆಗೆ ಹೋಗುವವರು ಬನ್ನೇರುಘಟ್ಟ ಜಂಕ್ಷನ್‌ನಲ್ಲಿ ಇಳಿದು, ಜಿಗಣಿ ರಸ್ತೆಯ ಮೂಲಕ ಬೊಮ್ಮಸಂದ್ರ ಜಂಕ್ಷನ್‌ನಲ್ಲಿ ಹೊಸೂರು ರಸ್ತೆಯನ್ನು ತಲುಪಿ ಪ್ರಯಾಣಿಸುವುದು.

ಹೆಚ್‌.ಎಸ್‌ಆರ್‌. ಲೇಔಟ್, ಕೋರಮಂಗಲ, ಬೆಳ್ಳಂದೂರು, ವೈಟ್‌ಫೀಲ್ಡ್‌ನಂತಹ ಪ್ರದೇಶಗಳಿಂದ ಹೊಸೂರು ಕಡೆಗೆ ಹೋಗುವವರು ಸರ್ಜಾಪುರ ರಸ್ತೆಯ ಮೂಲಕ ಚಂದಾಪುರ ತಲುಪಿ ನಂತರ ಹೊಸೂರು ಕಡೆಗೆ ಪ್ರಯಾಣಿಸಬಹುದು.

ಎಲೆಕ್ಟ್ರಾನಿಕ್ ಸಿಟಿ 1ನೇ ಹಂತದಲ್ಲಿ ಸಂಚರಿಸುವ ವಾಹನಗಳು 2ನೇ ಕ್ರಾಸ್ ರಸ್ತೆ, ಶಿಕಾರಿಪಾಳ್ಯ ರಸ್ತೆ, ಹುಲಿಮಂಗಲ ರಸ್ತೆ ಮತ್ತು ಗೊಲ್ಲಹಳ್ಳಿ ರಸ್ತೆಗಳನ್ನು ಬಳಸಬಹುದು.

ಸಾರ್ವಜನಿಕರು ಈ ಬದಲಾವಣೆಗಳನ್ನು ಗಮನಿಸಿ, ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ನಾಲ್ಕು ನಿಲ್ದಾಣಗಳಲ್ಲಿ ಮೆಟ್ರೂ ರೈಲು ನಿಲುಗಡೆಯಾಗಲ್ಲ

ಉದ್ಘಾಟನೆ ವೇಳೆ  ನಾಲ್ಕು ನಿಲ್ದಾಣಗಳಲ್ಲಿ ಮೆಟ್ರೂ ರೈಲು ನಿಲುಗಡೆಯಾಗಲ್ಲ. ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆವರೆಗೆ ಭದ್ರತಾ ದೃಷ್ಟಿಯಿಂದು 2 ಗಂಟೆಗಳ ಕಾಲ ಆರ್‌ವಿ ರೋಡ್,  ಸೌಥ್ ಎಂಡ್ ಸರ್ಕಲ್, ಜಯನಗರ ಮತ್ತು ಲಾಲ್‌ಬಾಗ್ ನಿಲ್ದಾಣದಲ್ಲಿ ಮೆಟ್ರೋ ರೈಲು ನಿಲುಗಡೆಯಾಗಲ್ಲ

 

PREV
Read more Articles on
click me!

Recommended Stories

ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!
Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!